ಡಾ. ವಸುಂಧರಾ ಭೂಪತಿ ಅವರು ಸಂಪಾದಿಸಿದ ಹಾಗೂ ಎನ್. ಗೋಪಾಲಕೃಷ್ಣ ಅವರು ಬರೆದ ಕೃತಿ-ಹದಿಹರೆಯ ಸಮಸ್ಯೆಗಳು-ಸವಾಲು -ಅರಿವು. ಮನುಷ್ಯನ ಬೆಳವಣಿಗೆಯಲ್ಲಿ ಹದಿಹರೆಯದ ಅವಧಿಯು ಅತ್ಯಂತ ತೀವ್ರಗತಿಯಲ್ಲಿರುತ್ತದೆ. ಮನೋದೈಹಿಕ ಬದಲಾವಣೆಗಳ ಬಗ್ಗೆ ಹದಿಹರೆಯದವರಲ್ಲಿ ತೀವ್ರ ಕುತೂಹಲದ ಜೊತೆಗೆ ಭೀತಿ-ಆತಂಕವೂ ಇರುತ್ತದೆ. ಈ ಅವಧಿಯಲ್ಲಿ ಸೂಕ್ತ ತಿಳಿವಳಿಕೆ ಮಾಹಿತಿಯ ಅಗತ್ಯವಿರುತ್ತದೆ. ಹದಿಹರೆಯದಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆಗಳು ಹಾಗೂ ಪರಹಾರೋಪಾಯಗಳ ಬಗ್ಗೆ ಅರಿವು ನೀಡುವ ಕೃತಿ ಇದು.
ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ. ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...
READ MORE