ಸುಧಾ ಮೂರ್ತಿ ಅವರ ಪ್ರವಾಸ ಕಥನ ಇದಾಗಿದ್ದು, ಹೊರದೇಶಗಳಲ್ಲಿ ಸುತ್ತಿ ಅಲ್ಲಿನ ವಿಶೇಷತೆಗಳನ್ನು ಸರಳವಾಗಿ ವಿವರಿಸಿದ್ದಾರೆ. ವಿದೇಶಗಳ ಪ್ರಾಚೀನತೆ ಮತ್ತು ಸಂಸ್ಕೃತಿ ವಿಭಿನ್ನತೆಗಳ ಕುರಿತು ಬರೆದಿದ್ದಾರೆ. ಈ ಕೃತಿಯು ಆರು ಬಾರಿ ಮುದ್ರಣಗೊಂಡಿದ್ದು ಇದು ಆರನೇ ಆವೃತ್ತಿಯದಾಗಿದೆ.
ಕನ್ನಡ ಹಾಗೂ ಇಂಗ್ಲಿಷ್ ಬರಹಗಾರ್ತಿ, ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಜನಿಸಿದ್ದು 1950 ಆಗಸ್ಟ್ 18ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ. ತಾಯಿ ವಿಮಲಾ, ತಂದೆ ರಾಮಚಂದ್ರ ಕುಲಕರ್ಣಿ. ವೃತ್ತಿಯಲ್ಲಿ ಕಂಪ್ಯೂಟರ್ ಇಂಜಿನಿಯರ್ ಆಗಿದ್ದ ಇವರು ಕನ್ನಡ ಹಾಗೂ ಇಂಗ್ಲಿಷ್ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ಅತಿರಿಕ್ತೆ, ಅವ್ಯಕ್ತೆ, ಮಹಾಶ್ವೇತೆ, ಡಾಲರ್ ಸೊಸೆ, ಋಣ, ತುಮುಲ, ಯಶಸ್ವಿ (ಕಾದಂಬರಿ), ಸಾಮಾನ್ಯರಲ್ಲಿ ಅಸಮಾನ್ಯರು (ಅಂಕಣ ಬರಹಗಳು), ಗುಟ್ಟೊಂದು ಹೇಳುವೆ, ಮನದ ಮಾತು (ಅನುಭವ ಕಥನ), ಹಕ್ಕಿಯ ತೆರದಲಿ ಮುಂತಾದ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಸುಧಾ ಮೂರ್ತಿ ಅವರಿಗೆ ರೋಟರಿ ...
READ MORE