‘ಹಂಪಿ ವಿಜಯನಗರ’ ಲೇಖಕ ಲಕ್ಷ್ಮಣ್ ತೆಲಗಾವಿ ಅವರ ಲೇಖನಗಳ ಸಂಕಲನ. ಈ ಸಂಗ್ರಹದಲ್ಲಿ 19 ಬರಹಗಳಿವೆ. ವಿಜಯನಗರ ಇತಿಹಾಸ ಸಂಶೋಧನೆಯ ಒಂದೊಂದು ಸವಾಲು- ಸಮಸ್ಯೆಗಳನ್ನು ಪ್ರತಿನಿಧಿಸುವಂತಹದು. ಈ ಸಂಕಲನದ ಬಹುತೇಕ ಬರಹಗಳು ಸಂಶೋಧನಾತ್ಮಕವಾಗಿದ್ದು, ಪ್ರಥಮ ಬಾರಿಗೆ ಹಲವಾರು ಹೊಸ ವಿಷಯಗಳನ್ನು ಪ್ರಕಟಪಡಿಸುವಲ್ಲಿ ಯಶಸ್ವಿಯಾಗಿವೆ.
ವಿದ್ಯಾರ್ಥಿ-ಅಧ್ಯಯನಶೀಲ ಸಂಶೋಧಕರಿಗೂ ಬರಹಗ್ರಂಥ ಹೆಚ್ಚಿನ ಪ್ರಯೋಜನಕ್ಕೆ ಬರುತ್ತದೆ. ಇಲ್ಲಿಯ ಬರಹಗಳು-ಸಂಪ್ರಬಂಧಗಳು ಸಂಶೋಧಕ ಪ್ರೊ.ಲಕ್ಷ್ಮಣ ತೆಲಗಾವಿ ಅವರ ವಿದ್ವತ್ತು ಪ್ರತಿಭೆಗಳಿಗೆ ಹಿಡಿದಿರುವ ಕನ್ನಡಿ.
ಇತಿಹಾಸಜ್ಞ, ಸಂಶೋಧಕ ಲಕ್ಷ್ಮಣ್ ತೆಲಗಾವಿಯವರು 1947 ಜನವರಿ 01 ಹುಟ್ಟಿದ್ದು ಚಿತ್ರದುರ್ಗದಲ್ಲಿ. ಹಲವಾರು ಐತಿಹಾಸಿಕ, ಸಾಮಾಜಿಕ ಚಳುವಳಿಗಳ ಗ್ರಂಥಗಳ ರಚಿಸಿ ಮತ್ತು ಪ್ರಕಟಿಸಿದ್ಧಾರೆ. ಚಿತ್ರದುರ್ಗ ದರ್ಶಿನಿ, ಇದು ಚಿತ್ರದುರ್ಗ, ಚಿತ್ರದುರ್ಗ ಹ್ಯಾನ್ ಇನ್ಸೈಟ್, ಬುರುಗು (ಚಿಂತನ ಲೇಖನಗಳು), ಕರ್ನಾಟಕ ಹಿಂದುಳಿದ ವರ್ಗಗಳ ಮತ್ತು ದಲಿತ ಚಳುವಳಿಗಳು, ಮೌರ್ಯ ಮತ್ತು ಶಾತವಾಹನಯುಗ, ಚಿತ್ರದುರ್ಗಜಿಲ್ಲಾ ಇತಿಹಾಸ, ಚಿತ್ರದುರ್ಗ ನಾಯಕ ಅರಸರು, ವಿಜಯನಗರಕಾಲದ ರಾಮಾನುಜಕೂಟಗಳು, ಎಪ್ಪತ್ತೇಳು ಪಾಳಯಗಾರರು, ಚಿತ್ರದುರ್ಗದ ಒನಕೆ ಓಬವ್ವ, ಚಾರಿತ್ರಿಕ ವಿವೇಚನೆ, ದೊಡ್ಡೇರಿಕದನ ಮುಂತಾದ ಕೃತಿಗಳನ್ನು ಸ್ವಾತಿ ಪ್ರಕಾಶನ, ವಾಲ್ಮೀಕಿ ಸಾಹಿತ್ಯ ಸಂಪದ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯಗಳು ...
READ MORE