‘ಹಸ್ತಿನಾವತಿ’ ಮಕ್ಕಳಿಗಾಗಿ ರಚಿಸಿದ ಮಹಾಭಾರತದ ಮೊದಲನೆಯ ಭಾಗ. ಈ ಭಾಗದಲ್ಲಿ ಶಂತನುವಿನ ಪ್ರೇಮ ಪ್ರಸಂಗದಿಂದ ಕಥನವು ಪ್ರಾರಂಭವಾಗಿ ಪಾಂಡವರು ವನವಾಸಕ್ಕೆ ಹೊರಡುವವರೆಗಿನ ಕಥೆಯನ್ನು ಹೆಣೆಯಲಾಗಿದೆ. ಭಾಷೆ ಈವತ್ತಿನ ಆಡುನುಡಿಗೆ ಹತ್ತಿರದ್ದು. ಹಾಗಾಗಿ ಮಹಾಭಾರತ ಈವತ್ತಿನ ಕಥೆಯಾಗಿ ಭಾಷಿಕವಾಗಿಯೂ ತನ್ನನ್ನು ತೋರಿಸಿಕೊಳ್ಳುವುದು. ನಿಷ್ಠುರವಾದ ಜೀವನಪರ ನಿಲುವು ಕಥನದ ಉದ್ದಕ್ಕೂ ಕಂಡುಬರುವುದು. ಸಮಾಜಮುಖತೆ, ಶೋಷಿತ ವರ್ಗದ ಪರವಾದ ನಿಲುವು ಭಾರತ ಕಥೆಗೆ ಒಂದು ಹೊಸ ಪರಿವೇಷವನ್ನೇ ನೀಡಿವೆ. ಮಕ್ಕಳಿಗಾಗಿ ಭಾರತವನ್ನು ಪುನಾರಚಿಸುತ್ತಿರುವೆನೆಂಬ ಸ್ಪಷ್ಟ ನಿಲುವಿನಿಂದಲೇ ಕವಿಯು ಹೊರಟಿರುವುದರಿಂದ ಸರಳತೆ, ಸ್ಪಷ್ಟತೆ, ಸಂಕ್ಷಿಪ್ತತೆಯ ಮಾರ್ಗವನ್ನು ಕಾಣಬಹುದು. ಸಹಜಧರ್ಮದಲ್ಲಿ ಸಲೀಸಾಗಿ ಸಾಗುವ ಮನೋಹರವಾದ ಕಥನವು ಮಕ್ಕಳಿಗೆ ಮಾತ್ರವಲ್ಲ ಭಾರತ ಕಥೆಯಲ್ಲಿ ಆಸಕ್ತಿಯುಳ್ಳ ಹಿರಿಯರಿಗೂ ಪ್ರಿಯವಾಗುವುದರಲ್ಲಿ ಸಂಶಯವಿಲ್ಲ.
ಮಕ್ಕಳ ಸಾಹಿತಿ ಎಂದು ಹೆಸರಾಗಿರುವ ಡಾ.ಸಿ.ಎಂ.ಗೋವಿಂದರೆಡ್ಡಿಯವರು ಮಕ್ಕಳ ಸಾಹಿತ್ಯದ ಜೊತೆಗೆ ಇತರೆ ಸಾಹಿತ್ಯದಲ್ಲೂ ಕೃತಿಗಳನ್ನು ರಚಿಸಿದ್ದಾರೆ. ಇವರು ೧೯೫೮ರ ಆಗಸ್ಟ್ ೧೧ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಚನ್ನಿಗರಾಯಪರ ಗ್ರಾಮದ ಮುನಿಸ್ವಾಮಿರೆಡ್ಡಿ ಮತ್ತು ಸುಬ್ಬಮ್ಮ ದಂಪತಿಗಳ ಮಗನಾಗಿ ಜನಿಸಿದರು. ತಾಳಕುಂಟೆ, ಲಕ್ಕೂರು ಮತ್ತು ಮಾಲೂರಿನಲ್ಲಿ ಕ್ರಮವಾಗಿ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಿಕ್ಷಣವನ್ನು ಪಡೆದು, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದುಕೊಂಡದ್ದಲ್ಲದೆ ‘ಕೋಲಾರಜಿಲ್ಲೆಯ ಜಾತ್ರೆಗಳು’ ಎಂಬ ವಿಷಯದಲ್ಲಿ ಪಿಎಚ್.ಡಿ. ಮಹಾಪ್ರಬಂಧವನ್ನು ರಚಿಸಿ ಡಾಕ್ಟರೇಟ್ ಪದವಿಯನ್ನೂ ಪಡೆದರು. ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಶಾಲಾಶಿಕ್ಷಕರಾಗಿ, ಪ್ರೌಢಶಾಲಾ ...
READ MORE