ಹಾಲು ಮತ ಸಂಸ್ಕೃತಿ ಎಂದು ಕರೆಯಲಾಗುವ ಕುರುಬ ಸಮುದಾಯದ ಕುರಿತ ಸಂಶೋಧನಾ ಕೃತಿ ಹಾಲುಮತ ಸಂಸ್ಕೃತಿ-೨. ಈ ಕೃತಿಯು ಕುರುಬ ಸಮುದಾಯದ ಜನರ ಬದುಕು, ಆಚರಣೆಗಳನ್ನು ತಿಳಿಸುವುದು ಮಾತ್ರವಲ್ಲದೇ ಆ ಸಮುದಾಯದ ಸಂಪೂರ್ಣ ಚಿತ್ರಣವನ್ನು ಓದುಗರ ಮುಂದೆ ತೆರೆದಿಡುತ್ತದೆ. ಈ ಕೃತಿಯಲ್ಲಿ ಕುರುಬ ಸಮಾಜದ ದೈವಗಳು, ಕಲೆ-ಸಂಪ್ರದಾಯ-ಸಾಹಿತ್ಯ, ಉದ್ಯೋಗ, ಆರ್ಥಿಕ ವಿಚಾರಗಳು, ವ್ಯಕ್ತಿನಾಮ-ಗ್ರಾಮನಾಮ-ಕುಟುಂಬನಾಮ ಮೊದಲಾದ ವಿಷಯಗಳ ಬಗ್ಗೆ ಈ ಸಂಪ್ರಬಂಧಗಳು ಚರ್ಚಿಸುತ್ತವೆ. ಹಾಲುಮತ ಸಮಾಜ ಸಾಹಿತ್ಯದ ಬಗ್ಗೆ ಅಧ್ಯಯನ ಮಾಡಿದ ಬಸವಣ್ಣೆಪ್ಪ ನೀಲಪ್ಪ ಹಳವಳ್ಳಿ ಮತ್ತು ತುರುವನೂರು ಕುರುಬರ ಲಿಂಗಯ್ಯನವರ ಸಾಹಿತ್ಯ ಸಾಧನೆಯನ್ನು ತಿಳಿಸುವ ಲೇಖನಗಳು ಈ ಕೃತಿಯಲ್ಲಿವೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಸ್ತ್ರಪ್ರತಿಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಅಧ್ಯಾಪಕ ಮತ್ತು ಮುಖ್ಯಸ್ಥರು. ಎಂ.ಎ, ಎಂಫಿಲ್ ಪಿಎಚ್.ಡಿ ಪದವಿ ಪಡೆದಿರುವ ಅವರಿಗೆ ಹಸ್ತಪ್ರತಿ-ಗ್ರಂಥಸಂಪಾದನೆ, ಹಾಲುಮತ ಸಂಸ್ಕ್ರತಿ, ಹಳೆಗನ್ನಡ-ನಡುಗನ್ನಡ -ನಡುಗನ್ನಡ ಸಾಹಿತ್ಯ, ಯೋಗವಿಜ್ಞಾನ ಆಸಕ್ತಿಯ ಅಧ್ಯಯನದ ಕ್ಷೇತ್ರಗಳು. ’ಕೆರೆಯ ಪದ್ಮರಸ ಮತ್ತು ಆತನ ವಂಶಜರು , ಕಂಠಪತ್ರ (1,2,3), ಹಾಲುಪತ್ರ’ ಪ್ರಕಟಿತ ಕೃತಿಗಳು. ಹಾಲುಮಠ ಅಧ್ಯಯನ ಪೀಠದ ಸಂಚಾಲಕ, ಅಂತರಾಷ್ಟ್ರೀಯ ವಚನ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗ್ರಂಥ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾನಿಲಯದಿಂದ ರಾಜ್ಯೋತ್ಸವ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅತ್ಯುನ್ನತ ಸಂಶೋಧನಾ ಗ್ರಂಥ ಪ್ರಶಸ್ತಿ ಮುಂತಾದ ಪ್ರಮುಖ ಪ್ರಶಸ್ತಿಗಳು ಇವರಿಗೆ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ-2011