ನೊಬೆಲ್ ಪ್ರಶಸ್ತ್ರಿ ಪುರಸ್ಕೃತ ಹೆಮಿಂಗ್ವೆ ಇಂಡಿಯನ್ ಕ್ಯಾಂಪ್ ಮ್ತು ಇತರ ಕಥೆಗಳು ಕೃತಿಯು ಎಸ್.ಗಂಗಾಧರಯ್ಯ ಅವರ ಅನುವಾದಿತ ಕೃತಿಯಾಗಿದೆ. ಈ ಕೃತಿಯ ಬೆನ್ನುಡಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ: ಮನುಷ್ಯ ವೈಯುಕ್ತಿಕ ಮತ್ತು ಸಾರ್ವಜನಿಕ, ಸಾರ್ವಜನಿಕವಾಗಿ ಬದುಕುತ್ತ ಹೋದಷ್ಟೋ ಅವನ ಭಾಷೆ ಸೊರಗುತ್ತದೆ. ಮಾತಿಗೆ ಹಳಸಲು ವಾಸನೆ ಬರುತ್ತೆ, ವಿಚಾರಗಳು ಸತ್ತು ಹೋಗುತ್ತವೆ... ಹೆಮಿಂಗ್ವೆ ಥರದವರು ಈ ದಿವಂಗತ ಸ್ಥಿತಿಯಿಂದ ದೂರ ಇರಲು ಯತ್ನಿಸುತ್ತಾರೆ.
ಇನ್ನು ನೊಬೆಲ್ ಬಹುಮಾನ ಪಡೆಯುವುದಕ್ಕಾಗಿ ಕಳಿಸಿದ ಹೇಳಿಕೆಯಲ್ಲಿ ಹೆಮಿಂಗ್ವೆ ಹೀಗೆ ಹೇಳಿಕೊಂಡಿದ್ದಾರೆ, “ಬರೆಯುವುದು ಏಕಾಂಗಿತನದ ಜೀವನ. ಬರೆಯುವುದನ್ನು ಯಾವ ಸಂಘ ಸಂಸ್ಥೆಗಳೂ ಕಲಿಸಲಾರವು. ಸಾಹಿತಿ ಜನತೆಯ ಗೌರವ ಸಂಪಾದಿಸಿ ಮೆರೆಯತೊಡಗಿದಂತೆಲ್ಲ ಆತನ ಕಲೆ ನಶಿಸುತ್ತಾ ಹೋಗುತ್ತದೆ. ಯಾಕೆಂದರೆ ಸಾಹಿತಿ ಒಬ್ಬನೇ ಕೂತು ಅನಂತತೆಯನ್ನು ಎದುರಿಸುತ್ತಾನೆ ಅಥವಾ ಎದುರಿಸುವುದರಲ್ಲಿ ವಿಫಲನಾಗುತ್ತಾನೆ. ಉತ್ತಮ ಸಾಹಿತಿಗೆ ಪ್ರತಿಯೊಂದು ಹೊಸ ಕೃತಿಯೂ ಹೊಸ ಆರಂಭ. ತನ್ನನ್ನೇ ಮೀರುವ ಕ್ರಿಯೆ. ಆತ ಯಾರೂ ಬರೆಯದೇ ಇದ್ದ ಅನನ್ಯ ಸೃಷ್ಟಿಗಾಗಿ ಪ್ರಯತ್ನಿಸಬೇಕಾಗುತ್ತದೆ; ಯಾರ ನೆರವೂ ಇಲ್ಲದೆ ಸೃಷ್ಟಿಸಬೇಕಾಗುತ್ತದೆ. ಸಾಹಿತಿಯಾದವನು ತನಗನಿಸಿದ್ದನ್ನು ಸಾಹಿತ್ಯವಾಗಿ ಬರೆಯಬೇಕು, ಮಾತಾಡುತ್ತಾ ಹೋಗಬಾರದು ಎಂದಿದೆ.
ಎಸ್. ಗಂಗಾಧರಯ್ಯ ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಕಳ್ಳಿಯವರು. ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಮತಿಘಟ್ಟದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಅನೇಕ ಪ್ರಕಟಿತ ಕೃತಿಗಳು ಇಂದು ಕನ್ನಡ ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗಿವೆ. ನವಿಲ ನೆಲ, ಒಂದು ಉದ್ದನೆಯ ನೆರಳು, ಇವರ ಕಥಾ ಸಂಕಲನಗಳು. ’ಬಯಲ ಪರಿಮಳ’ ಎಂಬ ವ್ಯಕ್ತಿಚಿತ್ರ ಸಂಪುಟವನ್ನು ರಚಿಸಿದ್ದಾರೆ. ವೈಕಂ ಅವರ ಕಥೆಗಳು, ಲೋರ್ಕಾ ನಾಟಕ,- ಎರ್ಮಾ, ವಿವಿಧ ಲೇಖಕರ ಕತೆಗಳು, ದಾರಿಯೋ ಫೋ ನಾಟಕ, ಚಿಂಗೀಝ್ ಐತ್ಮತೋವ್ ಕಾದಂಬರಿ ಜಮೀಲಾ, ಇವುಗಳನ್ನು ಕನ್ನಡೀಕರಿಸಿದ್ದಾರೆ. ಕುವೆಂಪು ಭಾಷಾಭಾರತಿಗಾಗಿ ...
READ MORE