ಸಮಾಜ ಸೇವಕಿ ಹಿಲ್ಡಾ ರಾಯಪ್ಪನ್ ಅವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡಿರುವ ತಮಿಳುನಾಡು ಮೂಲದ ಹಿಲ್ಲಾ ರಾಯಪ್ಪನ್ ಅವರದು ಸಮಾಜ ಸೇವೆ, ಶಿಕ್ಷಣ, ಮಹಿಳಾ ಸಬಲೀಕರಣ, ಆಪ್ತಸಲಹೆ ಇತ್ಯಾದಿ ಕ್ಷೇತ್ರಗಳಲ್ಲಿ ದೊಡ್ಡ ಹೆಸರು. ಅವರ ಜೀವನ-ಸಾಧನೆಯನ್ನು ಈ ಪುಸ್ತಕ ಪರಿಚಯಿಸುತ್ತದೆ. ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲೆಯ 249ನೇ ಪುಸ್ತಕ.
ರೋಹಿಣಿ ಬಿ.ಎಂ., ಎಂ.ಎ.(ಕನ್ನಡ) ಹಿಂದಿ(ಪ್ರವೀಣ) ಶಿಕ್ಷಣ ಪಡೆದ ಇವರು ನಿವೃತ್ತ ಶಿಕ್ಷಕಿ. 1944ರ ಏಪ್ರಿಲ್ 06 ರಂದು ಬಂಗ್ರ ಮಂಜೇಶ್ವರ ಕಾಸರಗೋಡಿನಲ್ಲಿ ಜನಿಸಿದರು. ತಂದೆ ಟಿ. ಕೊಗ್ಗಪ್ಪ, ತಾಯಿ ಬಿ.ಎಂ. ದೇವಕಿ. ಈಗ ಕೇರಳಕ್ಕೆ ಸೇರಿದ ಕಾಸರಗೋಡಿನ ಬಂಗ್ರಮಂಜೇಶ್ವರದ ಬಿ.ಎಂ.ರೋಹಿಣಿ ಓದಿದ್ದು ಮಂಗಳೂರಿನಲ್ಲಿ. ಟಿ.ಸಿ.ಹೆಚ್, ತರಬೇತಿ ಪಡೆದು ಶಿಕ್ಷಕಿಯಾಗಿದ್ದವರು (1964-2002), ನಿವೃತ್ತಿಯ ನಂತರ ತುಳಿತಕ್ಕೆ ಒಳಗಾದವರ ಬದುಕು ಬವಣೆಗಳ ಅಧ್ಯಯನ ಮತ್ತು ಸಂಸ್ಕತಿ ಸಂಶೋಧನೆಯಲ್ಲಿ ತೊಡಗಿಸಿಕೊಂಡು ಮಂಗಳೂರಿನ `ಡೀಡ್' ಸಂಸ್ಥೆಯ ಮೂಲಕ ವೇಶ್ಯಾಜೀವನದ ಅಧ್ಯಯನ ನಡೆಸಿದರು. ಆಮೇಲೆ ಗುಲಾಬಿ ಬಿಳಿಮಲೆಯವರ ಜೊತೆ ಸೇರಿ ದ.ಕ ಜಿಲ್ಲಾ ಮಹಿಳಾ ಕಾರ್ಮಿಕರ ಹೋರಾಟವನ್ನು ...
READ MORE