ಹಿಂದೂ ವೀರಶೈವರು ಅಂದರೆ ಲಿಂಗಾಯತರೇ ಆಗಿದ್ದಾರೆ. ಲಿಂಗಾಯತ ಎಂಬುದು ವೀರಶೈವರಿಗಿಂತ ಭಿನ್ನವಿಲ್ಲ ಎಂಬ ವಿಚಾರಗಳೊಂದಿಗೆ ತಮ್ಮ ಸಮರ್ಥನೆಗಳನ್ನು ನೀಡಿರುವ ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದ ಮೂರ್ತಿ ಅವರು ವೀರಶೈವವೂ ಹಿಂದೂ ಧರ್ಮದ ಭಾಗವೇ ಆಗಿದೆ. ವೀರಶೈವರಲ್ಲೇ ಲಿಂಗಾಯತವೂ ಇದೆ ಎಂಬ ತರ್ಕವನ್ನು ಮುಂದಿಟ್ಟ ಕೃತಿ ಇದು. ವೀರಶೈವ ಹಾಗೂ ಲಿಂಗಾಯತ ಎಂಬ ಎರಡೂ ಪರಿಕಲ್ಪನೆಗಳು ಬೇರೆ ಬೇರೆಯಲ್ಲ; ಅವು ಒಂದೇ ಕಾಂಡದ ಎರಡು ಟೊಂಗೆಗಳು ಎಂದು ಅಭಿಪ್ರಾಯಪಟ್ಟಿದ್ದು, ತಮ್ಮದೇ ರೀತಿಯಲ್ಲಿ ವಾದ ಮಂಡಿಸಿದ್ದಾರೆ.
ಹಿರಿಯ ಸಾಹಿತಿ - ಸಂಶೋಧಕರಾದ ಎಂ. ಚಿದಾನಂದ ಮೂರ್ತಿ ಅವರು ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರಿನಲ್ಲಿ ಜನಿಸಿದರು. ತಂದೆ ಕೊಟ್ಟೂರಯ್ಯ ಮತ್ತು ತಾಯಿ ಪಾರ್ವತಮ್ಮ. 1931ರ ಮೇ 10 ರಂದು ಜನಿಸಿದ ಅವರು ನೀತಿಗೆರೆ, ಹಿರೇಕೋಗಲೂರು, ಸಂತೇಬೆನ್ನೂರುಗಳಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಿದರು. ನಂತರ ದಾವಣಗೆರೆಯಲ್ಲಿ ಪ್ರೌಢಶಾಲೆ-ಇಂಟರ್ ಮೀಡಿಯಟ್ ಶಿಕ್ಷಣ (1950) ಮುಗಿಸಿ, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕನ್ನಡ ಬಿ.ಎ. (ಆನರ್ಸ್) ಪದವಿ (1953) ಪಡೆದರು. ಅಧ್ಯಾಪಕರಾಗಿ ನೇಮಕಗೊಂಡರು. ನಂತರ ಎಂ. ಎ. ಪದವಿ (1957) ಪ್ರಥಮ ರ್ಯಾಂಕ್ನೊಂದಿಗೆ ಗಳಿಸಿದರು. 'ಕನ್ನಡ ಶಾಸನಗಳ ಸಾಂಸ್ಕೃತಿಕ ಅಧ್ಯಯನ' ಎಂಬ ...
READ MORE