ಈಚರ್ ವಾರಿಯರ್ ಅವರು ರಚಿಸಿದ ಕಾದಂಬರಿಯನ್ನು ಲೇಖಕ ಬಿ. ಸುಜ್ಞಾನಮೂರ್ತಿ ಅವರು ‘ಹುಡುಕಾಟ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಕಳೆದು ಹೋದ ಮಗನಿಗಾಗಿ ತಂದೆಯೊಬ್ಬನ ತಲ್ಲಣವನ್ನು ಕಾದಂಬರಿಯ ವಸ್ತುವಾಗಿಸಿದ್ದು, ಮನೋವಿಶ್ಲೇಣಾತ್ಮಕವಾಗಿ ನಿರೂಪಣಾ ಶೈಲಿಯೂ ಈ ಕಾದಂಬರಿಯ ಆಕರ್ಷಣೆ. ಸನ್ನಿವೇಶಗಳ ಜೋಡಣೆಯಲ್ಲೂ ಕಲಾತ್ಮಕತೆ ಇದೆ. ಪರಿಣಾಮಕಾರಿ ಸಂಭಾಷಣೆಯೂ ಓದುಗರ ಮನಸ್ಸನ್ನು ಸೆರೆ ಹಿಡಿಯುತ್ತದೆ.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...
READ MORE