‘ಇದು ಸ್ಪೈನ್, ಇದು ಇಸ್ಪಾನ’ ಲೇಖಕ ಆಗುಂಬೆ ಎಸ್. ನಟರಾಜ್ ಅವರ ಪ್ರವಾಸ ಕಥನ. ತಮ್ಮ ಬ್ಯಾಂಕಿಂಗ್ ವ್ಯವಹಾರಗಳ ನಡುವೆ ಹಾರಿ ಬರುವ ಚೆಕ್, ಡ್ರಾಫ್ಟ್, ಸುತ್ತೋಲೆಗಳ ಮಧ್ಯೆಯೂ ಬಿಡುವು ಮಾಡಿಕೊಂಡು, ದೇಶ-ಸ್ಥಳಗಳನ್ನು ಸುತ್ತಾಡಿ, ಕುತೂಹಲಕಾರಿ, ವಿಸ್ಮಯ, ಅಚ್ಚರಿಯ ಸಂಗತಿ-ವಿದ್ಯಮಾನಗಳು-ಘಟನೆಗಳು ಕುರಿತು ಬರೆದಿದ್ದು ಓದುಗರನ್ನು ಬೆರಗುಗೊಳಿಸುತ್ತದೆ. ಆ ಸಾಲಿನಲ್ಲಿ ಈ ಕೃತಿ ಓದುಗರ ಗಮನ ಸೆಳೆಯುತ್ತದೆ.
ಲೇಖಕ ನಟರಾಜ್, 1939 ನವೆಂಬರ್ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...
READ MORE