ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಾಧ್ಯಾಪಕರು ಪಡುವ ಪಾಡುಗಳ ಕುರಿತು ಬರೆದವರ ಸಂಖ್ಯೆ ಬಹಳ ಕಡಿಮೆ. ಪ್ರಾಧ್ಯಾಪಕರ ಬೇಕು ಬೇಡಗಳ ಕುರಿತು, ಅವರ ಕಷ್ಟ ಭವಣೆಗಳ ಕುರಿತು ಅರಿತವರು ತುಂಬಾ ಕಡಿಮೆ ಸಂಖ್ಯೆಯಲ್ಲಿ ಇದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಪ್ರಾಧ್ಯಾಪಕರು ಪಡುವಂತಹ ಕಷ್ಟ ದುಮ್ಮಾನಗಳ ಕುರಿತು ಬರೆದಿರುವಂತಹ ಅಪರೂಪದ ಕಾದಂಬರಿ ಇದು ವಿದಾಯವಲ್ಲ. ಹಿಂದಿಯ ಕಾದಂಬರಿಕಾರರಾದಂತಹ ಡಾ. ಧರ್ಮೇಂದ್ರ ಗುಪ್ತ ಅವರ ‘ಇಸೆ ವಿದಾ ಮತ್ ಕಹೊ’ ಎನ್ನುವ ಹಿಂದಿ ಕಾದಂಬರಿಯ ಕನ್ನಡ ಅನುವಾದವನ್ನು ಪಾರ್ವತಿ ಅವರು ಮಾಡಿದ್ದಾರೆ. ಮೂಲ ಕೃತಿಯ ಆಶಯಕ್ಕೆ ದಕ್ಕೆ ಬರದ ರೀತಿಯಲ್ಲಿ ಈ ಕೃತಿಯು ಮೂಡಿ ಬಂದಿದೆ. ಶಿಕ್ಷಕರ ಮೇಲಾಗುವ ಶೋಷಣೆ, ಶೈಕ್ಷಣಿಕ ರಂಗದ ದುರವಸ್ಥೆಗಳಿಗೆ ಹಿಡಿದ ಕನ್ನಡಿಯಾಗಿ ಈ ಪುಸ್ತಕ ನಿರೂಪಿಸಲ್ಪಟ್ಟಿದೆ. ನಿರುದ್ಯೋಗದ ಸಮಸ್ಯೆಯಿಂದ ಬಳಲಿ, ಕೊನೆಗೆ ಖಾಸಗೀ ಸಂಸ್ಥೆಗಳಲ್ಲಿ ಹೊಸತಾಗಿ ಸೇರಿಕೊಳ್ಳುವ ಯುವ ಶಿಕ್ಷಕರು ಯಾವ ರೀತಿ ತಮ್ಮ ಮೇಲಾಗುವ ಶೋಷಣೆಯನ್ನು ಅಸಹಾಯಕವಾಗಿ, ಬೇಸತ್ತು ಸಹಿಸಿಕೊಂಡು ಕಾರ್ಯ ನಿರ್ವಹಿಸುತ್ತಾರೆ ಎನ್ನುವ ಕುರಿತು ಈ ಪುಸ್ತಕ ಬೆಳಕು ಚೆಲ್ಲುತ್ತದೆ.
ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...
READ MORE