‘ಈಸೋಪ’ ಕುನ್ವರ್ ಅನಿಲ್ ಕುಮಾರ್ ಅವರ ಕತೆಗಳನ್ನು ಜಿ.ಕೆ. ಮಧ್ಯಸ್ಥ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇಲ್ಲಿ ಮಕ್ಕಳಿಗಾಗಿ ದೇಶ ವಿದೇಶಗಳ ಸ್ವಾರಸ್ಯ ಕತೆಗಳಿವೆ. ಮನೋರಂಜನೆ, ತಿಳಿವಳಿಕೆ, ಬುದ್ಧಿ ಶಕ್ತಿ, ಸಾಂದರ್ಭಿಕ ಚಿತ್ತಸ್ಥೈರ್ಯ, ಮಾನವೀಯ ಮೌಲ್ಯಗಳು, ಹಾಸ್ಯ ಹೀಗೆ ಮಕ್ಕಳನ್ನು ಸೆಳೆಯುವ ರೀತಿಯಲ್ಲಿ ಈ ಕೃತಿಯು ನೀತಿಕತೆಗಳ ಸಂಕಲನವಾಗಿದೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE