‘ಇತಾಲಿಯಾ ನಾನು ಕಂಡಂತೆ’ ಕೃತಿಯು ಕು.ಶೀ ಹರಿದಾಸ ಭಟ್ಟ ಅವರ ಪ್ರವಾಸ ಕಥನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ; ಸುಮಾರು ಎರಡು ಸಾವಿರ ವರ್ಷಗಳಿಗೂ ಹೆಚ್ಚು ದೀರ್ಘವಾಗಿ ಐತಿಹಾಸಿಕ ಪರಂಪರೆ ಕನ್ನಡ ನಾಡಿನದು. ಈ ಅವಧಿಯಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಗಳು ಸಮೃದ್ಧವಾಗಿ ಶ್ರೀಮಂತವಾಗಿ ಬೆಳೆದು, ಈ ನಾಡಿನ ಇತಿಹಾಸವನ್ನು ಭವ್ಯವಾಗಿದೆ. ಒಂದು ನಾಡಿನ ಅಂತಃಸತ್ವ ಅಡಕವಾಗಿರುವುದೇ ಅದರ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ. ಈ ನೆಲೆಗಟ್ಟು ಭದ್ರವಾಗಿರಬೇಕಾದರೆ ಸಾಂಸ್ಕೃತಿಕ ಪರಂಪರೆ ಉತ್ಕರ್ಷಕ್ಕೆ ಏರಲು ಅನ್ನತ್ಯ ಸಾಧಿಸಲು ನಿರಂತರವಾಗಿ ಪ್ರಯತ್ನಗಳು ನಡೆಯಬೇಕು. ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿ ಬೆಸೆದುಕೊಂಡಿದ್ದರೂ ಕನ್ನಡ ತನ್ನದೇ ಆದ ವಿಶಿಷ್ಟ ಸಂಸ್ಕಾರಗಳನ್ನು, ಸಂಸ್ಕೃತಿಯನ್ನು ಹೊಂದಿದೆ ಎನ್ನುತ್ತದೆ ಈ ಕೃತಿ.
ಲೇಖಕ ಕು.ಶಿ. ಹರಿದಾಸ ಭಟ್ಟರು ಮೂಲತಃ ಉಡುಪಿಯವರು. ಇವರು ಜನಿಸಿದ್ದು 1924 ಮಾರ್ಚ್ 17ರಂದು. ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಉಡುಪಿಯ ಎಂಜಿಎಂ (ಮಹಾತ್ಮಗಾಂಧಿ ಮೆಮೋರಿಯಲ್ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದರು. ಇಂಗ್ಲೆಂಡ್, ಅಮೆರಿಕಾ, ರಷ್ಯಾ ಮುಂತಾದ ರಾಷ್ಟ್ರಗಳಿಗೆ ಭೇಟಿ ನೀಡಿದ್ದ ಇವರು ಮೂರು ಪ್ರವಾಸ ಕಥನಗಳನ್ನು ಬರೆದಿದ್ದಾರೆ. ಘಂಟಮಾರಾ, ಅವ್ಯಕ್ತಮಾನವ, ನಡುಹಗಲಿನ ಕಗ್ಗತ್ತಲೆ, ಲೋಕಾಭಿರಾಮ(ಮೂರು ಸಂಪುಟಗಳು) ಇತಾಲಿಯ ನಾನು ಕಂಡಂತೆ. ಜಗದಗಲ, ಒಮ್ಮೆ ರಶಿಯಾ ಇನ್ನೊಮ್ಮೆ ಇತಾಲಿಯ. ರಂಗಾಯಣ ಇವರ ಪ್ರಮುಖ ಕೃತಿಗಳು. ಇವರಿಗೆ ...
READ MORE