'ಇವರು ಚಿರಂಜೀವಿಗಳು' ಕಿರು ಹೊತ್ತಿಗೆಯಲ್ಲಿ ಎಂಟು ಚಿರಂಜೀವಿಗಳ ಬಗ್ಗೆ, ರಸಭರಿತವಾದ ಹಲಸಿನ ತೊಳೆಗಳನ್ನು ಜೇನಿನಲ್ಲಿ ಅದ್ದಿಟ್ಟಂತೆ ಮಧುರವಾಗಿ ಅಭಿವ್ಯಕ್ತಿಸಿದ್ದಾರೆ. ಅಧ್ಯಯನ ಶೀಲೆ ಶ್ರೀಮತಿ ಸಿ.ಬಿ. ಶೈಲಾ ಜಯಕುಮಾರ್ ಅವರ ಮತ್ತಷ್ಟು ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಣೆಯಾಗಲಿ ಜನ ಮನ್ನಣೆ ಗಳಿಸಲಿ ಎನ್ನುತ್ತಾರೆ ಲತಾ ಜೋಶಿ
ಸಿ.ಬಿ.ಶೈಲಾ ಜಯಕುಮಾರ್ ಅವರು ಮೂಲತಃ ಚಿತ್ರದುರ್ಗದವರು. MA (English) M Ed , Diploma in Journalism ನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ ಅವರು ಜೂನ್ 2020 ರಲ್ಲಿ ನಿವೃತ್ತಿ ಹೊಂದಿದರು. ಚಿತ್ರದುರ್ಗದ ಲೇಖಕಿಯರ ಕಥಾಸಂಕಲನದ 'ಮೊದಲ ಹೆಜ್ಜೆ' ಕೃತಿಯ ಸಂಪಾದಕಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಕೃತಿಗಳು : ನುಡಿಗನ್ನಡಿ (ಆಕಾಶವಾಣಿಯ ನಲ್ನುಡಿಗಳ ಸಂಕಲನ), ಅಹಲ್ಯಾಂತರಂಗ, ಏಕಸೂತ್ರದಲ್ಲಿ ಅನೇಕ (ವೈಚಾರಿಕ ಲೇಖನಗಳ ಸಂಕಲನ) , ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ರಸಪ್ರಶ್ನೆಗಳು, ಉತ್ತರೆಯ ಸ್ವಗತ, ಇವರು ಚಿರಂಜೀವಿಗಳು.(ಪುರಾಣಗಳ ಚಿರಾಯುಗಳ ಬಗ್ಗೆ), ಅಂತಃಕರಣದ ...
READ MORE