ಮೃತ್ಯುಂಜಯ ಶ್ರೀ ರೂಸಿ ಎಂ. ಲಾಲಾ , ಮಾನವನ ಶರೀರದ ಮೇಲೆ ಮತ್ತು ಮನಸ್ಸಿನ ಮೇಲೆ ತನ್ನ ಭಯಾನಕ ಕರಿಯ ನೆರಳನ್ನು ಚೆಲ್ಲುವ ಕ್ಯಾನ್ಸರ್ ರೋಗವನ್ನು ಗೆದ್ದು ಬದುಕಿನಲ್ಲಿ ಸಂಭ್ರಮವನ್ನು ಆಚರಿಸಿಕೊಂಡವರು. ರೋಗವನ್ನು ಕುರಿತು, ರೋಗಿಯ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಪ್ರಶ್ನೆಗಳಿಗೆ ಸ್ವಲ್ಪವಾದರೂ ಉತ್ತರವನ್ನು ಧನಾತ್ಮಕ ರೀತಿಯಲ್ಲಿ ಅರಿತುಕೊಳ್ಳಲು, ರೋಗವನ್ನು ನಿಭಾಯಿಸಲು ಮತ್ತು ಹೊಸ ಜೀವನವನ್ನು ನಡೆಸಲು ಬೇಕಾದ ಉಪಯುಕ್ತವಾದ ಮಾಹಿತಿಯನ್ನು ಈ ಕೃತಿಯೂ ನೀಡುತ್ತದೆ. ಇತರರೊಡನೆ ಇರುವ ಸಂಬಂಧ, ದೇವರಲ್ಲಿನ ಅಚಲವಾದ ನಂಬಿಕೆ, ನಿಸರ್ಗ, ಆಹಾರ, ಕಾಯಕ, ಸೃಜನಶೀಲ ಮನಸ್ಸು ಇದಕ್ಕೆ ಸಹಾಯ ಮಾಡುವಲ್ಲಿ ಮುಖ್ಯವಾಗುತ್ತದೆ. ಹೀಗೆ ಹಲವು ಸಂಗತಿಗಳ ಕುರಿತ ಮಾಹಿತಿಯನ್ನು ಈ ಕೃತಿಯಲ್ಲಿ ನೀಡಲಾಗಿದೆ.
ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...
READ MORE