ತತ್ವದರ್ಶಿ ಜಿಡ್ಡು ಕೃಷ್ಣಮೂರ್ತಿ ಅವರು ಬದುಕು ಹಾಗೂ ಕಲಿಕೆ ಕುರಿತು ವ್ಯಕ್ತಪಡಿಸಿದ ವಿಚಾರಗಳ ಕೃತಿಯನ್ನು ಲೇಖಕ ಮಹಾಬಲೇಶ್ವರ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಭಾರತೀಯ ತತ್ವಶಾಸ್ತ್ರವನ್ನು ಅತ್ಯಂತ ಸರಳವಾಗಿ ತಿಳಿಸಿಕೊಡುವುದರ ಜೊತೆಗೆ ಸರಳ ಜೀವನ ನಡೆಸಿದ ಜಿಡ್ಡು ಕೃಷ್ಣಮೂರ್ತಿ ಅವರು ಭಾರತೀಯ ತತ್ವಶಾಸ್ತ್ರ ಹಾಗೂ ಬೌದ್ಧತತ್ವಗಳ ಸಾಮಿಪ್ಯವನ್ನು ಗುರುತಿಸಿ ಪ್ರಚಾರ ಕೈಗೊಂಡ ಅವರನ್ನು ‘ಬೋಧಿಸತ್ವ ಅಂತಃಕರಣದ ಮೈತ್ರೇಯ ಅವತಾರಿ - ವಿಶ್ವಗುರು’ ಎಂದೇ ಗುರುತಿಸಲಾಗುತ್ತಿತ್ತು. ಅವರ ಚಿಂತನೆಗಳಿಗೆ ಧಕ್ಕೆ ಬಾರದಂತೆ ಅನುವಾದಿಸಿ, ಜಿಡ್ಡು ಅವರ ವ್ಯಕ್ತಿತ್ವದ ಎತ್ತರವನ್ನುಲೇಖಕರು ಪರಿಚಯಿಸಿದ್ದಾರೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE