‘ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿಜಗತ್ತು ಸಂಪುಟ 4’ ಕೆ.ಸಿ. ಶಿವಾರೆಡ್ಡಿ ಅವರ ಸಂಪಾದಕತ್ವದ ಕಾದಂಬರಿಗಳ ಸಮಗ್ರ ಸಗ್ರಹ ಭಾಗ-2 ಕೃತಿಯಾಗಿದೆ. ಕನ್ನಡ ಸಾಂಸ್ಕೃತಿಕ ಜಗತ್ತಿನಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳು ಪ್ರಾರಂಭಿಕ ಯೋಚನೆಗಳಲ್ಲಿ ಕಾಲಕಾಲಕ್ಕೆ ಉಂಟುಮಾಡಿದ ತಲ್ಲಣಗಳು ಹೊಸ ಪ್ರಯೋಗಗಳಿಗೆ ಕಾರಣವಾದದ್ದು ಬಹುಮುಖ್ಯ ಸಂಗತಿಯಾಗಿದೆ. ಕನ್ನಡ ಸಾಹಿತ್ಯ ಚರಿತ್ರೆಯ ಮಹತ್ವದ ಕಾಲಘಟ್ಟದಲ್ಲಿ ಅವರ ಕೃತಿಗಳು ಹೊಸ ಹೊಸ ದಿಗಂತಗಳು ನೋಟಕ್ಕೆ ದೊರಕುವಲ್ಲಿ ಕಾರಣವಾದವು ಎನ್ನುವುದನ್ನು ನಾವು ಈ ಕೃತಿಯ ಮುಖೇನ ಕಾಣಬಹುದು.
ಮುಖ್ಯವಾಗಿ ಈ ಕೃತಿಯಲ್ಲಿ ಮಾಯಾಲೋಕ, ಕಾಡು ಮತ್ತು ಕ್ರೌರ್ಯ ಕಾದಂಬರಿಗಳನ್ನು ಕಾಣಬಹುದಾಗಿದೆ. ಅನುಬಂಧ ವಿಭಾಗದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ವ್ಯಕ್ತಿ ಮತ್ತು ಕೃತಿ ಪರಿಚಯ, ಚಲನಚಿತ್ರ-ಪ್ರಶಸ್ತಿಗಳು, ಅನ್ಯ ಭಾಷೆಗಳಿಗೆ ಅನುವಾದಗೊಂಡಿರುವ ಕೃತಿಗಳು, ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಕುಟುಂಬದ ವಂಶವೃಕ್ಷ, ಮಾಯಾಲೋಕ-ಮುನ್ನುಡಿ, ಕಾಡು ಮತ್ತು ಕ್ರೌರ್ಯ-ಪ್ರಕಾಶಕರ ಮಾತನ್ನು ಕಾಣಬಹುದು.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಕೆ.ಸಿ. ಶಿವಾರೆಡ್ಡಿ ಅವರು ಆಧುನಿಕ ಗ್ರಂಥ ಸಂಪಾದನೆಯಲ್ಲಿ ಮಹತ್ವದ ಕೆಲಸ ಮಾಡಿದ್ದಾರೆ. ಕುವೆಂಪು ಅವರ ಸಮಗ್ರ ಕೃತಿಗಳ ಸಂಪಾದಕರಾಗಿ ಅವರು ಮಾಡಿರುವ ಕೆಲಸ ಅನನ್ಯವಾದದ್ದು. ರಾಷ್ಟ್ರಕವಿ ಕುವೆಂಪು ಅವರ ಸಮಗ್ರ ಕೃತಿಗಳನ್ನು 9 ಸಂಪುಟಗಳಲ್ಲಿ ಸಂಪಾದಿಸಿ ಪ್ರಕಟಿಸಿದ್ದಾರೆ. ಹಾಗೆಯೇ ಬೇಂದ್ರೆಯವರ ಕವಿತೆಗಳನ್ನು ಕುರಿತ ’ಅಂಬಿಕಾತನಯನ ನಂಬಿಕೆಯ ಹಾಡು’ ಹಾಗೂ ’ಶತಮಾನದ ಕವಿತೆ ಜೋಗಿ’ ಕೃತಿಗಳನ್ನು ಸಂಪಾದಿಸಿ ಪ್ರಕಟಿಸಿದ್ದಾರೆ. ಒಂದನೇ ನಾಗವರ್ಮನ ಕರ್ನಾಟಕ ಕಾದಂಬರಿ, ಕನಸುಗಳ ಕವಿ ಕಂಬಾರರ ಚಕೋರಿ ಒಂದು ಅಧ್ಯಯನ, ಇದು ಎಂಥಾ ಹಾಡು (ಕವಿ ...
READ MORE