ಲೇಖಕ ಸಂಪಟೂರು ವಿಶ್ವನಾಥ ಅವರು ಬರೆದ ಕೃತಿ-ಕಾಡಿನ ರಾಜ ಮತ್ತು ಇತರ ಮಕ್ಕಳ ಕಥೆಗಳು. ಬಾಲ ಸಾಹಿತ್ಯ ಮಾಲಿಕೆಯಡಿ ಧೃತಿ ಪ್ರಕಾಶನವು ಈ ಕೃತಿ ಪ್ರಕಟಿಸಿದೆ. ಮಕ್ಕಳ ಸಾಹಿತ್ಯ ರಚನೆಯಲ್ಲಿ ಲೇಖಕರು ತಮ್ಮ ಛಾಪು ಮೂಡಿಸಿದ್ದು, ಕಾಡಿನ ರಾಜ ಸೇರಿದಂತೆ ಹಲವು ಕಥೆಗಳನ್ನು ಬರೆದಿದ್ದು, ಇವೆಲ್ಲವೂ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿವೆ. ಸರಳ ಭಾಷೆ, ನಿರೂಪಣ ಶೈಲಿಯು ಮಕ್ಕಳಿಗೆ ಮುದ ನೀಡುತ್ತದೆ.
ಲೇಖಕ ಸಂಪಟೂರು ವಿಶ್ವನಾಥ್ ಅವರು ಜನಿಸಿದ್ದು 1938 ಫೆಬ್ರುವರಿ 28ರಂದು. ತಾಯಿ ನಾಗಮ್ಮ, ತಂದೆ ಎಸ್. ಹನುಮಂತರಾವ್, ಮಲ್ಲೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪದವಿ ಪಡೆದ ಇವರು ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು. ವಿಜ್ಞಾನ, ಸಾಹಿತ್ಯ, ಸಂಗೀತ, ನೃತ್ಯ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿದ್ದ ವಿಶ್ವನಾಥರು ಸುಮಾರು ಎರಡು ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. ಇವರಿಗೆ ಗೊರೂರು ಸಾಹಿತ್ಯ ಪ್ರಶಸ್ತಿ, ಎಂ.ಜಿ. ರಂಗನಾಥನ್ ಸ್ಮಾರಕ ಪ್ರಶಸ್ತಿ, ಸ್ನೇಹ – ಸೇತು ಬರಹಗಾರರ ಪ್ರಶಸ್ತಿ, ಕರ್ನಾಟಕ ...
READ MORE