ಕನ್ನಡ ಕಥನ ಸಾಹಿತ್ಯ ಕಾದಂಬರಿ

Author : ಜಿ.ಎಸ್. ಆಮೂರ

Pages 195

₹ 370.00




Year of Publication: 2013
Published by: ಸಪ್ನ ಬುಕ್ ಹೌಸ್
Address: ಗಾಂಧಿನಗರ, ಬೆಂಗಳೂರು-560009

Synopsys

‘ಕನ್ನಡ ಕಥನ ಸಾಹಿತ್ಯ ಕಾದಂಬರಿ’ ಜಿ.ಎಸ್. ಆಮೂರ ಅವರ ಕೃತಿ. ಕನ್ನಡ ಕಾದಂಬರಿಗಳ ಬಗ್ಗೆ ಬರೆದಿರುವ ಮಹತ್ವದ ಕೃತಿ ಇದು. ಆಮೂರರ ಹಾಗೆ ಆಳವಾದ ವಿದ್ವತ್ತನ್ನೂ, ಮನಸ್ಸಿಗೆ ಹಚ್ಚಿಕೊಂಡು ಬರೆಯುವವರನ್ನೂ ಎದುರಿಟ್ಟುಕೊಂಡು ನಡೆಯಬಹುದಾದ ಸಂವಾದ ಕನ್ನಡ ಕಾದಂಬರಿಯ ಓದನ್ನು ಶ್ರೀಮಂತಗೊಳಿಸಬಲ್ಲದು. ಇಂಗ್ಲಿಷ್ ಸಾಹಿತ್ಯದ ಅಭ್ಯಾಸದಂತೆಯೇ, ಕನ್ನಡ ಸಾಹಿತ್ಯದ ಅಭ್ಯಾಸವೂ ಇಡೀ ಮನಸ್ಸನ್ನು ಸುಶಿಕ್ಷಿತಗೊಳಿಸಬಲ್ಲ ಶಿಸ್ತಾಗಬಹುದೆಂದು ನಮಗೆ ಅನ್ನಿಸುವ ಕನ್ನಡ ಸಾಹಿತ್ಯ ವಿಮರ್ಶಕರು ಅಪರೂಪ. ಇಂಥ ಅಪರೂಪದ ಹಿರಿಯ ವಿಮರ್ಶಕರು ಡಾ. ಆಮೂರರು. ಇಲ್ಲಿ ಕನ್ನಡದ ಕಾದಂಬರಿಗಳ ಕುರಿತಾದ ವಿದ್ವತ್ ಪೂರ್ಣ ವಿಮರ್ಶೆಯನ್ನು ಕಾಣಬಹುದಾಗಿದೆ.

About the Author

ಜಿ.ಎಸ್. ಆಮೂರ
(08 May 1925 - 28 September 2020)

ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...

READ MORE

Related Books