ಕನ್ನಡದಲ್ಲಿಯೇ ರಚನೆಯಾದ ಶಾಸನಗಳ ಅಧ್ಯಯನ ಈ ಕೃತಿ. ಡಾ. ಆರ್.ಸಿ. ಹಿರೇಮಠ ಅವರೊಂದಿಗೆ ಸೇರಿ ಎಂ.ಎಂ. ಕಲಬುರ್ಗಿ ಅವರು ರಚಿಸಿದ ಪುಸ್ತಕ.
ಒಂದೆಡೆ ಪೂರ್ವದ ಹಳಗನ್ನಡ, ಹಳಗನ್ನಡ, ನಡುಗನ್ನಡವನ್ನು ಗಮನದಲ್ಲಿರಿಸಿಕೊಂಡು ಮತ್ತೊಂದೆಡೆ, ಜೈನ, ಬ್ರಾಹ್ಮಣ, ವೀರಶೈವ ಧರ್ಮಗಳನ್ನು ಆಧರಿಸಿ ಶಾಸನಗಳನ್ನು ಅಭ್ಯಸಿಸಲಾಗಿದೆ. ಒಟ್ಟು 32 ಮಹತ್ವದ ಶಾಸನಗಳ ಅಧ್ಯಯನ ಇದಾಗಿದೆ. ಜೊತೆಗೆ ಪದವಿವರಣಾ ಕೋಶವೂ ಇದೆ. ಕನ್ನಡದ ಬಗ್ಗೆ ಉನ್ನತ ಅಧ್ಯಯನ ನಡೆಸುವವರನ್ನು ಗಮನದಲ್ಲಿರಿಸಿಕೊಂಡು ಕೃತಿ ಮೂಡಿಬಂದಿದೆ.
ಈ ಪುಸ್ತಕವನ್ನು ಕರ್ನಾಟಕ ವಿಶ್ವವಿದ್ಯಾಲಯದ ಪ್ರಸಾರಾಂಗವು ಮೊದಲಿಗೆ ಪ್ರಕಟಿಸಿತ್ತು.
ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...
READ MORE