ಕವಿ ಹಾಗೂ ಲೇಖಕ ನಿಷ್ಠಿ ರುದ್ರಪ್ಪ ಅವರು ರಚಿಸಿದ ಕೃತಿ-ಕನ್ನಡ ತೇರನ್ನೆಳೆವವರು. ಕನ್ನಡಕ್ಕೆ ಸುಮಾರು 2 ಸಾವಿರಕ್ಕೂ ಅಧಿಕ ವರ್ಷದ ಇತಿಹಾಸವಿದ್ದು, ಭಾರತ ಸರ್ಕಾರ ಈ ಭಾಷೆಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸಿದೆ. ಕನ್ನಡದ ಸಿರಿವಂತಿಕೆಯನ್ನು ಹೆಚ್ಚಿಸಿ ಉಳಿಸಿ-ಬೆಳೆಸಿಕೊಂಡವರು ಸಹಸ್ರಾರು ಜನರಿದ್ದು, ಅವರನ್ನು ಸ್ಮರಿಸುವುದು ಕನ್ನಡಿಗರ ಕರ್ತವ್ಯ. ಈ ಹಿನ್ನೆಲೆಯಲ್ಲಿಈ ಕೃತಿಯನ್ನು ಬೆಂಗಳೂರಿನಲ್ಲಿ ಜರುಗಿದ 77ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಪ್ರಕಪಡಿಸಿತು. ಡಾ. ನಲ್ಲೂರು ಪ್ರಸಾದ ಅವರ (2008 ರಿಂದ 2011ರ) ಅಧ್ಯಕ್ಷತೆಯ ಅವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾಗಿ ಸೇವೆಸಲ್ಲಿಸಿದ ಮತ್ತು ಜಿಲ್ಲಾ ಘಟಕ ಮತ್ತು ಗಡಿನಾಡ ಘಟಕಗಳ ಅಧ್ಯಕ್ಷರಾಗಿ ಸೇವೆಸಲ್ಲಿಸಿದ ಒಟ್ಟು 45 ಜನ ಕಾರ್ಯಕಾರಿ ಸಮಿತಿ ಸದಸ್ಯರ ಸಂಕ್ಷಿಪ್ತ ಜೀವನ ಚಿತ್ರಣವನ್ನು ಮತ್ತು ಅವರ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಸೇವೆಯನ್ನು ಪರಿಚಯಸುವ ಕೃತಿ ಇದಾಗಿದೆ.
ಲೇಖಕ ನಿಷ್ಠಿ ರುದ್ರಪ್ಪ ಅವರು ಮೂಲತಃ ಬಳ್ಳಾರಿಯವರು. ತಂದೆ ನಿಷ್ಠಿ ಬಸವರಾಜಪ್ಪ, ತಾಯಿ ಪ್ರಭಾವತಿ. ಬಿ.ಕಾಂ, ಎಂ.ಎ, ಬಿ.ಇಡಿ ಪದವೀಧರರು. ಸ್ಮಾತಕೋತ್ತರ ವಚನ ಕಮ್ಮಟ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್ಯಾಂಕ್, ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷರು, ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ. ಸಿಂಡಿಕೇಟ್ ಮಾಜಿ ಸದಸ್ಯರು. ಖಾಸಗಿ ಕಂಪನಿಯಲ್ಲಿ ಸೇವೆ, ಬಳ್ಳಾರಿಯ ಲೋಕದರ್ಶನ ಪತ್ರಿಕೆಯಲ್ಲಿ ವರದಿಗಾರರಾಗಿ, ಬಳ್ಳಾರಿಯ ವೈದ್ಯಕೀಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಾರಿ ಹಾಗೂ ಕಲ್ಪತರು ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಹೊಸಪೇಟೆಯ ಆಕಾಸವಾಣಿ ಕೇಂದ್ರದಿಂದ ‘ಚಿಂತನೆ’ ಹಾಗೂ ಹಚ್ಚೇವು ಕನ್ನಡದ ದೀಪ’ ದೂರದರ್ಶನದಲ್ಲಿ ...
READ MORE