ಲೇಖಕ ಡಾ. ಕೆ. ಸತ್ಯನಾರಾಯಣ ಅವರ ಹಲವಾರು ವ್ಯಕ್ತಿಗಳ ಚಿತ್ರಣದ ಕೃತಿ-ಕಪಾಳಮೋಕ್ಷ ಪ್ರವೀಣ. ಕವಿ ಬಿ.ಆರ್. ಲಕ್ಷ್ಮರಾವ್ ಅವರು ಕೃತಿಗೆ ಬೆನ್ನುಡಿ ಬರೆದು ‘ಬಾಲ್ದ ಹಾಗೂ ತಾರುಣ್ಯದ ಕಾಲದಲ್ಲಿ ಗುತ್ತಲ ಹಾಗೂ ಕೊಪ್ಪ ಭಾಗದಲ್ಲಿ ತಾವು ಕಂಡ ಹಾಗೂ ಕಂಡುಕೊಂಡ ಶ್ರೀಸಾಮಾನ್ಯ ಸ್ತರದ ಹಲವಾರು ವ್ಯಕ್ತಿಗಳ ಸ್ವಭಾವಗಳನ್ನು ಹಾಗೂ ವ್ಯಕ್ತಿ ಚಿತ್ರಣಗಳನ್ನು ಸ್ವಾರಸ್ಯಕರವಾಗಿ ಚಿತ್ರಿಸಿದ್ದಾರೆ. ಇವರಲ್ಲಿ ಬಹುತೇಕರು ತಮ್ಮ ಅನನ್ಯತೆಯಿಂದ ಬಹುಕಾಲ ಉಳಿಯುತ್ತಾರೆ’ ಎಂದು ಪ್ರಶಂಸಿಸಿದ್ದಾರೆ.
ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ. 1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ. ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...
READ MORE