ಪತ್ರಕರ್ತೆ ಹಾಗೂ ಲೇಖಕಿ ಗೌರಿ ಲಂಕೇಶ್ ಅವರ ಕೃತಿ-ಕಪ್ಪು ಮಲ್ಲಿಗೆ ಮತ್ತು ಇತರ ಅನುವಾದಿತ ಕತೆಗಳು. ವಿವಿಧ ಭೌಗೋಳೀಕ ಪ್ರದೇಶಗಳ ವಿವಿಧ ಕತೆಗಾರರ ಕತೆಗಳನ್ನು ಅನುವಾದಿಸಿ ನೀಡಲಾಗಿದೆ. ಅವು ಪಾತ್ರಗಳ ವಿಶೇಷತೆ ಹಾಗೂ ಮನುಷ್ಯ-ಸಂಬಂಧಗಳ ಅಗತ್ಯ ಹಾಗೂ ಅನಿವಾರ್ಯತೆಯ ದೃಷ್ಟಿಯಿಂದ ಗಮನ ಸೆಳೆಯುತ್ತವೆ. ಭಾಷೆ ತುಂಬಾ ಆಪ್ತವಿದ್ದು, ಓದು ಸರಾಗವಾಗಿಸಿದೆ.
ಭಾರತೀಯ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರು 1962 ಜನವರಿ 29 ರಂದು ಜನಿಸಿದರು. ಗೌರಿ ಲಂಕೇಶ್ ಪತ್ರಿಕೆ' ವಾರ ಪತ್ರಿಕೆ ನಡೆಸುತ್ತಿದ್ದರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರು. ಪ್ರಸಿದ್ಧ ಅಂಕಣಕಾರರು. 'ಆವರಣ' ಎಂಬ ವಿಕೃತಿ-ವಿಮರ್ಶೆ (ಸಂಪಾದಿತ), ಇದ್ರೀಸ್ ಶ್ರೀರವರ ದರವೇಶಿ ಕತೆಗಳು (ಅನುವಾದ), ಗಿಡುಗಗಳಿಗೆ ಬಲಿಯಾದ ಗಿಳಿ ಬೇನ್ಜೀರ್ (ಜೀವನಚಿತ್ರ), ಹಲವಾರು ಫ್ರೆಂಚ್, ಹಿಂದಿ ಇಂಗ್ಲಿಷ್ ಭಾಷೆಯ ಸಣ್ಣ ಕಥೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಬೆಂಗಳೂರು ದೆಹಲಿ ಹಾಗೂ ಫ್ರಾನ್ಸ್ ಮತ್ತು ಅಮೆರಿಕಾದಲ್ಲಿ ಪತ್ರಕರ್ತೆಯಾಗಿ ಸೇವೆ ಸಲ್ಲಿಸಿದ್ದಾರೆ, ಲಂಕೇಶ್ ವಾರಪತ್ರಿಕೆಯ ಸಂಪಾದಕರು ಮತ್ತು ಗೈಡ್' ಮಾಸಪತ್ರಿಕೆಯ ಪ್ರಕಾಶಕರು, ಕರ್ನಾಟಕ ಕೋಮು ಸೌಹಾರ್ದ ...
READ MORE