ಕರ್ನಾಟಕದ ಸಾಂಸ್ಕೃತಿಕ, ರಾಜಕೀಯ, ವೈಚಾರಿಕ, ಸಾಮಾಜಿಕ ಚರಿತ್ರೆಯನ್ನು ವಿವರಿಸಿರುವ ಕೃತಿ 'ಕರ್ನಾಟಕ ಚರಿತ್ರೆ'. ಒಟ್ಟು ಏಳು ಸಂಪುಟಗಳಲ್ಲಿ ಕರ್ನಾಟಕದ ಚರಿತ್ರೆಯನ್ನು ಒಳಗೊಂಡಿದೆ. 1997ರಲ್ಲಿ ಮೊದಲ ಮುದ್ರಣ ಕಂಡ ಕೃತಿಯು ಒಳಗೊಂಡು ಈವರೆಗೆ ಪ್ರಕಟವಾದ ಏಳು ಸಂಪುಟಗಳ ಮೌಲ್ಯ 4000 ರೂ.ಗಳು.
ಹಿರಿಯ ಇತಿಹಾಸ ತಜ್ಞ, ಶಿಕ್ಷಣ ತಜ್ಞರಾದ ಪ್ರೊ. ಬಿ. ಷೇಕ್ ಅಲಿ ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರು. ಮೈಸೂರು ವಿ.ವಿ.ಯಿಂದ ಆನರ್ಸ್ ಪದವಿ ಹಾಗೂ ಆಲಿಘರ್ ಮುಸ್ಲಿಂ ವಿ.ವಿ,ಯಿಂದ ಪಿಎಚ್ಡಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರು. ಪ್ರೊ. ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿದ್ದಾರೆ. ಕನ್ನಡ ವಿ.ವಿ.ಪ್ರಕಟಿಸಿರುವ ”ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಪ್ರಧಾನ ಸಂಪಾದಕರು. ಇವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ...
READ MORE