ಕರ್ನಾಟಕದ ಆರ್ಥಿಕ ಹಾಗೂ ಸಾಮಾಜಿಕ ಚರಿತ್ರೆಯ ಕೆಲವು ನೆಲೆಗಳು ಇದು ಹನ್ನೆರಡನೇ ಸಂಪುಟವಾಗಿದೆ. ಕರ್ನಾಟಕದ ಹುಟ್ಟು, ಬೆಳವಣಿಗೆಯಿಂದ ಮೊದಲುಗೊಂಡು ಇಂದಿನವರೆಗಿನ ಸಾಮಾಜಿಕ ಹಾಗೂ ಆರ್ಥಿಕ ನೆಲೆಗಳು ಯಾವುವು, ಅವುಗಳ ಪರಿಸ್ಥಿತಿ ಏನಿತ್ತು ಎಂಬುದನ್ನು ಎಲ್ಲಾ ಸಂಪುಟಗಳು ವಿವರಿಸುತ್ತವೆ.
ಕರ್ನಾಟಕದ ಆಧುನಿಕ ಇತಿಹಾಸ ರಚನೆಗೆ ಸಂಬಂಧಿಸಿದಂತೆ ಪ್ರಮುಖರಾದ ಎಸ್. ಚಂದ್ರಶೇಖರ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿದ್ದರು. ಕಲಬುರ್ಗಿ ಕೇಂದ್ರೀಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಅವರು ಸದ್ಯ ನಿವೃತ್ತರಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
READ MORE