ಖ್ಯಾತ ಇತಿಹಾಸ ತಜ್ಞ ಡಾ. ಸೂರ್ಯನಾಥ ಕಾಮತ್ ಅವರು ರಚಿಸಿದ ಕೃತಿ-ಕರ್ನಾಟಕದ ಸಂಕ್ಷಿಪ್ತ ಇತಿಹಾಸ. ಮುಖ್ಯವಾಗಿ ಇಲ್ಲಿ ಕರ್ನಾಟಕದ ಸಾಂಸ್ಕೃತಿಕ-ಧಾರ್ಮಿಕ ವಲಯಗಳನ್ನು ಕೇಂದ್ರೀಕರಿಸಿದ್ದು, ಕೃತಿಯ ವಿಶೇಷ. ಈ ಎಲ್ಲ ತಾಣಗಳ ಚಾರಿತ್ರಿಕ-ಧಾರ್ಮಿಕ ಹಿನ್ನೆಲೆಯಲ್ಲಿ ವಿಷಯಗಳನ್ನು ಆಯ್ದು ಕೊಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪರೀಕ್ಷಾರ್ಥಿಗಳಿಗೆ, ಸಾಮಾನ್ಯ ಓದುಗರಿಗೆ, ವಿಷಯ ಜ್ಞಾನ ಹೆಚ್ಚಿಸಿಕೊಳ್ಳುವ ಆಸಕ್ತರಿಗೆ ಈ ಕೃತಿ ಉಪಯುಕ್ತವಾಗಿದೆ.
ಸಾಹಿತಿ ಸೂರ್ಯನಾಥ ಕಾಮತ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದರು. ತಂದೆ ಉಪೇಂದ್ರಕಾಮತ್, ತಾಯಿ ಪದ್ಮಾವತಮ್ಮ. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಸ್ನಾತಕೋತ್ತರ ಪದವಿ ಗಳಿಕೆ. ಪ್ರಾಧ್ಯಾಪಕ, ಸಂಶೋಧಕ, ಇತಿಹಾಸ ಅವರ ಆಸಕ್ತಿಯ ಕ್ಷೇತ್ರಗಳು. ‘TULUVA IN VIJAYANAGAR TIMES’ ಅವರ ಪಿಎಚ್.ಡಿ. ಪ್ರಬಂಧ. ಉತ್ಥಾನ ಪತ್ರಿಕೆಯ ಸಹ ಸಂಪಾದಕರಾಗಿ, ಪ್ರಜಾವಾಣಿ ಸಹ ಸಂಪಾದಕರಾಗಿದ್ದರು. ‘ಕರ್ನಾಟಕದ ಇತಿಹಾಸ ಮಂಜರಿ, ಕರ್ನಾಟಕದ ವೀರರಾಣಿಯರು, ವಿಜಯನಗರ ಕಥೆಗಳು, ಕೆಳದಿಯ ಚೆನ್ನಮ್ಮಾಜಿ, ವೀರರಾಣಿ ಅಬ್ಬಕ್ಕ’ ಅವರ ಪ್ರಮುಖ ಕೃತಿಗಳು. ಥೇಮ್ಸ್ನಿಂದ ಗಂಗೆಗೆ, ಈಸಿ ಜೈಸಿದರು (ಸಾಮಾಜಿಕ) ; ಕೃಷ್ಣದೇವರಾಯ, ಮುಳ್ಳಿನಹಾದಿ ...
READ MORE