'ಕತೆಯಾದಳು ಹುಡುಗಿ' ಕೃತಿಯು ಸ್ತ್ರೀ ವಿಮೋಚನೆಯ ಸಾಮಾಜಿಕ, ಆರ್ಥಿಕ, ರಾಜಕೀಯ ಆಯಾಮಗಳನ್ನು ಸ್ತ್ರೀವಾದಿ ಸಾಹಿತ್ಯ ಮತ್ತು ಸಂಸ್ಕೃತಿಯ ಮೀಮಾಂಸೆಯೊಂದಿಗೆ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ನಿರ್ವಚನ ಅನಾವರಣಗೊಂಡ ರೀತಿಯನ್ನು ತೆರೆದಿಡುವ ಪ್ರಯತ್ನವಾಗಿದೆ. ಸಂಶೋಧನೆಯ ಪೂರ್ವಬಂಧದ ಚೌಕಟ್ಟಿನೊಳಗೆ ಶತಮಾನದ ಕಥಾ ಸಾಹಿತ್ಯವನ್ನು ಇಲ್ಲಿ ಅವಲೋಕಿಸಲಾಗಿದೆ. ಕನ್ನಡ ಸಾಹಿತ್ಯ ಪ್ರಕಾರದಲ್ಲಿ ಪ್ರಮುಖವಾದ ಕಥಾ ಪ್ರಕಾರ ಕುರಿತು ಲೇಖಕಿ ಗೀತಾ ಶೆಣೈ ನಡೆಸಿದ ಸಂಶೋಧನೆಯ ಪೂರ್ಣ ಮಾಹಿತಿ ಈ ಕೃತಿಯಲ್ಲಿದೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE