ಕಥಾಸರಿತ್ಸಾಗರದ ಹನ್ನೆರಡನೆಯ ಲಂಬಕದ ಮುಂದುವರಿಕೆ ಈ ಸಂಪುಟವಾಗಿದೆ. ಇಪ್ಪತ್ತೈದು ಬೇತಾಳಗಳ ಕಥೆಗಳನ್ನು ಒಳಗೊಂಡು ಜನರ ಮನಸ್ಸನ್ನು ಸೂರೆಗೊಂಡು, ರೋಮಾಂಚಗೊಳಿಸಿ, ಅಂತಹುದೇ ಹಲವಾರು ಕಥೆಗಳ ಸೃಷ್ಟಿಗೆ ಪ್ರೇರಣೆಯನ್ನಿತ್ತ ಲಂಬಕದ ಈ ಭಾಗವು ಬಹಳ ವಿಶಿಷ್ಟವಾಗಿ ಮೂಡಿಬಂದಿದೆ. ಈ ಲಂಬಕದ ಇನ್ನೊಂದು ಪ್ರಮುಖ ಅಂಶವೆಂದರೆ, ಅದರಲ್ಲಿ ಬರುವ ಸ್ಮಶಾನದ ಭಯಂಕರ ವರ್ಣನೆಯಾಗಿದ್ದು, ಬೇತಾಳದ ಕಥೆಗಳಿಗೆ ಉತ್ತಮವಾದ ಸನ್ನಿವೇಶವನ್ನು ಒದಗಿಸುತ್ತದೆ. ಈ ಸಂಗತಿಗಳ ಕುರಿತ ಮಾಹಿತಿಯನ್ನು ಲೇಖಕರು ಪುಸ್ತಕದಲ್ಲಿ ವಿವರಿಸಿದ್ದಾರೆ.
ಲೇಖಕ, ಅನುವಾದಕ ಟಿ.ಎಸ್. ವೆಂಕಣ್ಣಯ್ಯನವರು (ಜನನ:01-10-1885) ಹುಟ್ಟಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳೇಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ. ಮೈಸೂರಿನಲ್ಲಿ ಕನ್ನಡ, ತೆಲುಗು ಸಾಹಿತ್ಯಾಧ್ಯಯನ ಮಾಡಿ, ಮದರಾಸು ವಿಶ್ವವಿದ್ಯಾಲಯದಿಂದ 1914ರಲ್ಲಿ ಎಂ.ಎ. ಪದವಿ ಪಡೆದರು. ಉದ್ಯೋಗಕ್ಕಾಗಿ ಸೇರಿದ್ದು ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಉಪಾಧ್ಯಾಯರಾಗಿ. ಬೆಂಗಳೂರು ಸೇಂಟ್ ಜೋಸೆಫ್ ಕಾಲೇಜು, ದೊಡ್ಡಬಳ್ಳಾಪುರ ಮುಂತಾದೆಡೆ ಶಿಕ್ಷಕ ವೃತ್ತಿ. ಬಹುಭಾಷಾ ವಿಶಾರದರು ಅವರು ಕನ್ನಡ, ತೆಲುಗು, ತಮಿಳು, ಸಂಸ್ಕೃತ, ಬಂಗಾಳಿ ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದಾರೆ. ’ಶ್ರೀ ರಾಮಕೃಷ್ಣ ಲೀಲಾ ಪ್ರಸಂಗದ ಭಾಗ, ರವೀಂದ್ರರ ಪ್ರಬಂಧಗಳನ್ನಾಧರಿಸಿ ಬರೆದ ‘ಪ್ರಾಚೀನ ಸಾಹಿತ್ಯ’ ಅನುವಾದ ಕೃತಿಗಳು. ’ಹರಿಹರನ ...
READ MORE