ಡಾ. ಬಿ.ಆರ್. ಮಂಜುನಾಥ ಅವರ ಕೃತಿ-ಕಥನ ಕಣಜದ ಗಟ್ಟಿ ಕಾಳು. ಮನೋವಿಜ್ಞಾನಿ ಸಿಗ್ಮಂಡ್ ಫ್ರಾಯ್ಡ್ ಸೇರಿದಂತೆ ಕಥನ ಸಾಹಿತ್ಯ ಬೆಳವಣಿಗೆಗೆ ತಮ್ಮದೇ ಸಂಶೋಧನೆಯ ಮಿತಿಯಲ್ಲಿ ಕೊಡುಗೆಗಳನ್ನು ನೀಡಿದ ಸುಮಾರು 11 ಮಹನೀಯರ ಕುರಿತು ಬರೆದ ಲೇಖನಗಳ ಸಂಗ್ರಹ ಕೃತಿ ಇದು. ಇವರ ಕೊಡುಗೆಗಳನ್ನು ಲೇಖಕರು ಸಾಹಿತ್ಯ ಲೋಕದ ಬೆರಗು-ಬೆಡಗು ಎಂದು ಬಣ್ಣಿಸಿದ್ದಾರೆ.
ಲೇಖಕ ಬಿ. ಆರ್. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...
READ MORE