ಪತ್ರಕರ್ತ ರವಿ ಬೆಳೆಗೆರೆ ಅವರ ಕೃತಿ-ಖಾಸ್ ಬಾತ್-2006. `ಹಾಯ್ ಬೆಂಗಳೂರು’ ವಾರಪತ್ರಿಕೆಯ ಸಂಪಾದಕರಾಗಿರುವ ಲೇಖಕರು ಬರೆದ ಅಂಕಣಗಳ ಬರೆಹಗಳನ್ನು ಸಂಕಲಿಸಲಾಗಿದೆ. ವ್ಯಕ್ತಿಗತ ನೆಲೆಯ ಅನುಭವಗಳು, ಪ್ರಚಲಿತ ವಿದ್ಯಮಾನಗಳಿಗೆ ಸ್ಪಂದನೆ-ಪ್ರತಿಕ್ರಿಯೆ ಇತ್ಯಾದಿ ಅಂಶಗಳು ಇಲ್ಲಿಯ ಪ್ರಧಾನ ವಸ್ತುಗಳು. ನಿರೂಪಣಾ ಶೈಲಿಯೊಂದಿಗೆ ಇಲ್ಲಿಯ ಅಂಕಣ ಬರಹಗಳು ಓದುಗರ ಗಮನ ಸೆಳೆಯುತ್ತವೆ.
ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...
READ MORE