ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಕೋಪ ಹೇಗಿರಬೇಕು, ಎಷ್ಟಿರಬೇಕು, ಹತೋಟಿ ಹೇಗೆ. ವ್ಯಕ್ತಿತ್ವದ ಪ್ರಮುಖ ದೋಷ ಎಂದೇ ಪರಿಗಣಿಸಬಹುದಾದ ವಿಷಯವೆಂದರೆ ಕೋಪ. ಅದು ಇಡೀ ವ್ಯಕ್ತಿತ್ವದ ಕರಿನೆರಳು ಆಗಿದೆ. ಏನೆಲ್ಲ ಅರ್ಹತೆಗಳಿದ್ದರೂ ಕೋಪ ಒಂದಿದ್ದರೆ ಎಲ್ಲವೂ ತಿರಸ್ಕಾರಕ್ಕೆ ಗುರಿಯಾಗುತ್ತವೆ. ಆದ್ದರಿಂದ, ಕೋಪವನ್ನು ಹೇಗೆ ನಿಯಂತ್ರಿಸಿಕೊಳ್ಳಬೇಕು. ಕೋಪವನ್ನು ಎಲ್ಲಿ ಯಾವಾಗ ಮತ್ತು ಹೇಗೆ ವ್ಯಕ್ತಪಡಿಸಬೇಕು ಎಂಬುದರ ಉತ್ತಮ ಮಾಹಿತಿಯನ್ನು ನೀಡುವ ಕೃತಿ ಇದು.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE