ಕೊಪ್ಪರಿಗೆ ಮನೆ

Author : ನಾ. ಮೊಗಸಾಲೆ

Pages 500

₹ 400.00




Year of Publication: 2024
Published by: ಸಾಹಿತ್ಯ ಪ್ರಕಾಶನ
Address: ಸಾಹಿತ್ಯ ಪ್ರಕಾಶನ, ಕೊಪ್ಪೀಕರ್‍ ರಸ್ತೆ, ನ್ಯು ಹುಬ್ಬಳ್ಳಿ, ಹುಬ್ಬಳ್ಳಿ-580020.
Phone: 094481 10034

Synopsys

ಡಾ. ನಾ. ಮೊಗಸಾಲೆ ಅವರ ಕಾದಂಬರಿ 'ಕೊಪ್ಪರಿಗೆ ಮನೆ' ಹಲವು ಕಾರಣಗಳಿಂದ ಮಹತ್ವದ್ದಾಗಿದೆ. ಕೌಟುಂಬಿಕ ನೆಲೆಯ ಕಥಾನಕವೊಂದು ಸಾಮಾಜಿಕವೂ ರಾಷ್ಟ್ರೀಯವೂ ಆಗುವ ಅಪರೂಪದ ಕೃತಿಯಿದು. ಹತ್ತೊಂಬತ್ತನೆಯ ಶತಮಾನದ ಕೊನೆಯ ವಸಾಹತುಶಾಹಿ ಆಡಳಿತ ಮತ್ತು ಇಪ್ಪತ್ತನೆಯ ಶತಮಾನದ ಗಾಂಧೀಯುಗ - ಹೀಗೆ ಎರಡು ತಲೆಮಾರುಗಳಿಗೆ ಸೇರಿದ; ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡು ಪ್ರದೇಶದ ಊರೊಂದರ ಪಟೇಲಿಕೆ ಮತ್ತು ದೇವಸ್ಥಾನದ ಮುಕ್ತೇಸರಿಕೆ ಇದ್ದ ಗಣ್ಯ ಹವ್ಯಕ ಬ್ರಾಹ್ಮಣ ಜಮೀನುದಾರ ಕುಟುಂಬದ – ಎರಡು ತಲೆಮಾರುಗಳ ಕಥಾನಕ ಇಲ್ಲಿದೆ.

ಅಪ್ಪ ಶಂಕರ ಭಟ್ಟ ಮತ್ತು ಮಗ ಕೇಶವ ಭಟ್ಟರು ಆಧುನಿಕತೆಗೆ ಸ್ಪಂದಿಸಿದ್ದು ದೇವಾಲಯ ಜೀರ್ಣೋದ್ಧಾರ ಮತ್ತು ಮನೆಗಳಿಗೆ ಹಂಚು ಹೊದಿಸುವ ರೂಪಕದ ಮೂಲಕ ದಾಖಲಾದರೆ; ಕಾಲಪರಿವರ್ತನೆಯು ಸ್ತ್ರೀ ಸ್ವಾತಂತ್ರ್ಯಕ್ಕೆ ಅನುವುಮಾಡಿಕೊಟ್ಟದ್ದು ಇಲ್ಲಿನ ಸ್ತ್ರೀಯರನ್ನು ಇಬ್ಬರು ಪ್ರಮುಖ ಪಾತ್ರಗಳು ಗೌರವದಿಂದ ನಡೆಸಿಕೊಂಡದ್ದನ್ನು ತೋರಿಸುವ ಮೂಲಕ ದಾಖಲಾಗಿದೆ; ಮೂರನೆಯದಾಗಿ ಈ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪಂದಿಸಿದ್ದು ಕೇಶವ ಭಟ್ಟರು ಪಟೇಲಿಕೆಗೆ ರಾಜೀನಾಮೆ ಎಸೆದು ರಾಷ್ಟ್ರೀಯ ಕಾರಣಕ್ಕೆ ಸ್ಪಂದಿಸುವುದರ ಮೂಲಕವೂ ಹೋರಾಟದ ಹಲವು ಮುಖಗಳ ಚಿತ್ರಣದ ಮೂಲಕವೂ ಇಲ್ಲಿ ದಾಖಲಾಗಿದೆ.

ಈ ಮೂರು ವಿಷಯ-ಆಶಯಗಳು ಕಾದಂಬರಿಯ ವಸ್ತುವಿನ ಮಹತ್ವವನ್ನು ಸೂಚಿಸುವಂತಿವೆ. ಕಾದಂಬರಿಯ ಆಶಯಗಳನ್ನು ಪರಿಶೀಲಿಸಲು ಸಮೀಚೀನವಾದ ಕಥಾಸಂವಿಧಾನವನ್ನು ರಚಿಸಿಕೊಂಡಿರುವುದು ಡಾ. ಮೊಗಸಾಲೆಯವರು ಕಥನಕಲೆಯಲ್ಲಿ ಪಡೆದಿರುವ ಹಿಡಿತಕ್ಕೆ ಸಾಕ್ಷಿಯಾಗಿದೆ. 'ಕೊಪ್ಪರಿಗೆ ಮನೆ' ಕಾದಂಬರಿ ಮೊಗಸಾಲೆಯವರ ಶ್ರೇಷ್ಠ ಕಾದಂಬರಿಗಳಲ್ಲಿ ಒಂದು ಮಾತ್ರವಲ್ಲ; ಕನ್ನಡದ ಮುಖ್ಯ ಕಾದಂಬರಿಗಳಲ್ಲಿಯೂ ಒಂದು.

About the Author

ನಾ. ಮೊಗಸಾಲೆ
(27 August 1944)

ಕಾಸರಗೋಡು ತಾಲೂಕಿನ ಕೋಳ್ಯೂರಿನ ಮೊಗಸಾಲೆ ಎಂಬ ಗ್ರಾಮದಲ್ಲಿ ಜನಿಸಿದ ಡಾ. ನಾರಾಯಣ ಮೊಗಸಾಲೆ ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆಗೆ ಕಥೆ ಕಾದಂಬರಿಗಳನ್ನು ರಚಿಸಿರುವ ಅವರು ಸಾಹಿತ್ಯ ಸೃಷ್ಟಿಯ ಜೊತೆಗೆ ಸಾಹಿತ್ಯ ಪ್ರಸಾರದಲ್ಲಿಯೂ ವಿಶೇಷ ಕೆಲಸ ಮಾಡಿದ್ದಾರೆ. ಕಾಂತಾವರ  ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ವರ್ತಮಾನದ ಮುಖಗಳು, ಪಲ್ಲವಿ, ಮೊಗಸಾಲೆಯ ನೆನಪುಗಳು, ಪ್ರಭವ, ಸ್ವಂತಕ್ಕೆ ಸ್ವಂತಾವತಾರ, ನೆಲದ ನೆರಳು, ಇದಲ್ಲ, ಇದಲ್ಲ, ಇಹಪರದ ಕೊಳ, ಕಾಮನ ಬೆಡಗು, ದೇವರು ಮತ್ತೆ ಮತ್ತೆ (ಕವನ ಸಂಕಲನಗಳು), ಅರುವತ್ತರ ತೇರು, ಪೂರ್ವೋತ್ತರ, ಕರಣ ಕಾರಣ (ಸಮಗ್ರ ಕಾವ್ಯ), ಮಣ್ಣಿನ ...

READ MORE

Related Books