ವಸುಧೇಂದ್ರ ಅವರು ಬರೆದ ಸುಲಲಿತ ಪ್ರಬಂಧಗಳ ಸಂಕಲನ-ಕೋತಿಗಳು. ಕತೆ-ಕಾದಂಬರಿಗಳನ್ನು ಪರಿಣಾಮಕಾರಿಯಾಗಿ ಬರೆಯುವ ವಸುಧೇಂದ್ರ ಅವರು ಕೋತಿಗಳು ಸಂಕಲನದಲ್ಲಿ ತಾವು ಒಬ್ಬ ಉತ್ತಮ ಪ್ರಬಂಧಕಾರರೂ ಎಂಬುದನ್ನು ನಿರೂಪಿಸಿದ್ದಾರೆ. ವಿಷಯ ವಸ್ತುವಿನ ಆಯ್ಕೆ, ಅದು ನಂತರ ಪಡೆಯುತ್ತಾ ಹೋಗುವ ರೂಪು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MORE