ಕೃಷ್ಣಚಂದರ ಕಥೆಗಳು

Author : ಪಂಚಾಕ್ಷರಿ ಹಿರೇಮಠ

Pages 96

₹ 72.00

Buy Now


Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580/01

Synopsys

ಉರ್ದು ಹಾಗೂ ಹಿಂದಿ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಡಾ. ಪಂಚಾಕ್ಷರಿ ಹಿರೇಮಠ ಅನುವಾದಿಸಿದ್ದಾರೆ. ಸುಮಾರು 50 ವರ್ಷ ಕಾಲ ಬರೆದು ಉರ್ದು ಸಾಹಿತ್ಯ ವಲಯದಲ್ಲಿ ಕೃಷ್ಣಚಂದ ಅವರದು ತುಂಬಾ ಪ್ರಸಿದ್ಧ ಹೆಸರು. ಕಥೆ, ಕಾದಂಬರಿ, ನಾಟಕ, ಪ್ರವಾಸ ಸಾಹಿತ್ಯ, ವಿಡಂಬನೆ, ಹಾಸ್ಯ ಬರಹಗಳ ಮೂಲಕ ಉರ್ದು ಸಾಹಿತ್ಯವನ್ನು ಸಿರಿವಂತಗೊಳಿಸಿದವರು. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಅಮಾನವೀಯ ಸಂಪ್ರದಾಯಗಳನ್ನು ಹಾಗೂ ವಿಲಾಸೀ ಜೀವನದ ಪೊಳ್ಳುತನವನ್ನು ಚಿತ್ರಿಸಿದ ಅವರ ಕಥೆಗಳು ಕಲ್ಪನೆಯ ರಮ್ಯಲೋಕದ ಸೊಗಸನ್ನು ಮತ್ತು ವಾಸ್ತವಿಕ ಲೋಕದ ಕಠೋರತೆಯನ್ನು ಸಮರಸಗೊಳಿಸುತ್ತವೆ. ಲೇಖಕ ಕೃಷ್ಣಚಂದರ ಪ್ರಸಿದ್ಧ 8 ಕಥೆಗಳನ್ನು ಪಂಚಾಕ್ಷರಿ ಹಿರೇಮಠರು ಕನ್ನಡಕ್ಕೆ ಅನುವಾದಿಸಿದ್ದಾರೆ.

ಈ ಕೃತಿಯು ಉರ್ದು ಸಾಹಿತ್ಯ ಕೃಷ್ಣಚಂದರ, ಮಹಾಲಕ್ಷ್ಮೀಯ ಸೇತುವೆ, ಆತ ಮತ್ತೆ ಬಂದಾಗ, ಗುಲಾಬಿಯ ಬೇಗಂ, ಒಂದು ಪತ್ರ, ಒಂದು ಪರಿಮಳ, ಮೊಹೆಮಜೋದಾರೋದ ಭಂಡಾರ, ಅಮೃತಸರ, ಕತ್ತಲು-ಬೆಳಕು, ಕೈಟ್ ಅಧ್ಯಾಯಗಳನ್ನು ಒಳಗೊಂಡಿದೆ. 

About the Author

ಪಂಚಾಕ್ಷರಿ ಹಿರೇಮಠ
(06 January 1933 - 14 March 2025)

ಪಂಚಾಕ್ಷರಿ ಹಿರೇಮಠ ಅವರು 1933ರ ಜನವರಿ 6 ರಂದು ರಾಯಚೂರು ಜಿಲ್ಲೆಯ ಕೊಪ್ಪಳ ತಾಲೂಕಿನ ಬಿಸರಹಳ್ಳಿಯಲ್ಲಿ ಜನಿಸಿದರು. ತಾಯಿ ಬಸಮ್ಮ; ತಂದೆ ವೇದಮೂರ್ತಿ ಮಲಕಯ್ಯ. 2 ವರ್ಷದವರಿದ್ದಾಗ ಪಂಚಾಕ್ಷರಿ ತಮ್ಮ ತಂದೆಯನ್ನು ಕಳೆದುಕೊಂಡರು.  ಬಿಸರಹಳ್ಳಿಯಲ್ಲಿ ಆರಂಭಿಕ ಶಿಕ್ಷಣ, ನಂತರ ಕೊಪ್ಪಳಕ್ಕೆ ಬಂದರು. ಭಾರತ ಸ್ವತಂತ್ರವಾದರೂ ಸಹ ನಿಜಾಮಶಾಹಿ ಆಳ್ವಿಕೆಯಲ್ಲಿದ್ದ ಕೊಪ್ಪಳದಲ್ಲಿ ದಬ್ಬಾಳಿಕೆ ನಡೆದಿತ್ತು. ಸ್ವಾಮಿ ರಮಾನಂದ ತೀರ್ಥರ ಮುಂದಾಳುತ್ವದಲ್ಲಿ  ಹೈ-ಕ ವಿಮೋಚನಾ ಚಳವಳಿ ಆರಂಭವಾಗಿತ್ತು. ವಿಮೋಚನೆಯಾದ ಬಳಿಕ ಬಿಸರಹಳ್ಳಿಗೆ ಮರಳಿದ ಪಂಚಾಕ್ಷರಿ ಅವರು ಕೊಪ್ಪಳ, ಕಲಬುರಗಿ ಸುತ್ತಾಡಿ ಕೊನೆಗೆ ಧಾರವಾಡಕ್ಕೆ ಬಂದರು. ಅವರು ಸ್ವಾಧ್ಯಾಯ ಬಲದಿಂದಲೇ ಸ್ನಾತಕೋತ್ತರ ಪದವಿ ಪಡೆದರು. 1985ರಲ್ಲಿ ಅಮೆರಿಕೆಯ ಅರಿಝೋನಾ ಜಾಗತಿಕ ...

READ MORE

Related Books