ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಮಧುರ ಮಿಲನ. ವಿವಾಹಪೂರ್ವ ಯುವಕ-ಯುವತಿಯರಿಗೆ ದಾಂಪತ್ಯ ಕುರಿತು ನೀಡಿರುವ ಸಲಹಾ ರೂಪದ ಕೃತಿ. ಮನೋವೈಜ್ಞಾನಿಕವಾಗಿ ಆಪ್ತ ಸಲಹೆಗಳನ್ನು ಲೇಖಕರು ನೀಡಿದ್ದಾರೆ. ವಿವಾಹವೆಂದರೆ ಹೊಣೆಗಾರಿಕೆ. ಅದನ್ನು ಹೇಗೆ ನಿರ್ವಹಿಸಬೇಕು. ಎಷ್ಟೊಂದು ಸಹನೆ ಹೊಂದಿರಬೇಕು ಇತ್ಯಾದಿ ಮೌಲ್ಯಗಳ ಕುರಿತು ಮಾಹಿತಿ ನೀಡಿದ್ದು ಈ ಕೃತಿಯ ಹೆಗ್ಗಳಿಕೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE