‘ಮಧ್ಯಯಾನ’- ಆಧ್ಯಾತ್ಮಿಕಾನುಸಂಧಾನ ಲೇಖಕ ಮಲ್ಲೇಪುರಂ ಜಿ. ವೆಂಕಟೇಶ ಅವರು ವಿಜಯವಾಣಿ ದಿನಪತ್ರಿಕೆಗೆ ಬರೆದ ‘ಅನುಭಾವದ ಬೆಳಗು’ ಅಂಕಣ ಬರಹಗಳ ಸಂಕಲನ. ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಈ ಗ್ರಂಥಕ್ಕೆ ವಿಸ್ತಾರವಾದ ವಿವರಣೆ ಹಾಗೂ ವಿಶ್ಲೇಷಣೆಗಳನ್ನು ಬರೆದಿದ್ದಾರೆ. ಈಗಾಗಲೇ ಪ್ರಕಟವಾದ ಮೊದಲ ಕಟ್ಟು 'ಪೂರ್ವಯಾನ' ಅನಂತರದ ಭಾಗ 'ಮಧ್ಯಯಾನ'. ಆಧ್ಯಾತ್ಮಿಕ ಬರೆಹಗಳನ್ನು ಮತ್ತು ಶಾಸ್ತ್ರಗ್ರಂಥಗಳನ್ನು ಬರೆಯುವುದರಲ್ಲಿ ಇವರು ಅಗ್ರಗಣ್ಯ ಲೇಖಕರು. ಆಧ್ಯಾತ್ಮಿಕ ಜಿಜ್ಞಾಸುಗಳಿಗಾಗಿ ರಚಿಸಿರುವ ಅನುಭವಾಮೃತದ ವಿಶ್ಲೇಷಣಾತ್ಮಕ ರೂಪದ ವ್ಯಾಖ್ಯಾನ ಗ್ರಂಥವಾದ ಇದು ಕನ್ನಡ ಅದ್ವೈತ ಸಾಹಿತ್ಯಕ್ಕೆ ಅನುಪಮ ಕೊಡುಗೆಯಾಗಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE