ಮರಾಠಿ ಮೂಲದ ಲೇಖಕ ವಿಶ್ವಾಸ್ ಪಾಟೀಲ ಅವರ ಮಹಾನಾಯಕ ಕೃತಿಯನ್ನು ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕಾದಂಬರಿ. ಸ್ವಾತಂತ್ಯ್ರ ಯೋಧ, ಆಜಾದ್ ಹಿಂದ್ ಸೇನೆ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನಾಯಕ ಸುಭಾಶಚಂದ್ರ ಭೋಸ್ ಅವರ ಜೀವನಾಧಾರಿತ ಕಾದಂಬರಿ. ಜೀವನ ವೃತ್ತಾಂತದ ನಿರೂಪಣೆ ಶೈಲಿಯಿಂದ ಸರಳವಾಗಿ ಮತ್ತು ಅತ್ಯಂತ ಕುತೂಹಲಕಾರಿಯಾಗಿ ಓದಿಸಿಕೊಂಡು ಹೋಗುವ ಕಾದಂಬರಿ ಇದು.ಈ ಮಹಾನಾಯಕನ ಅಂತ್ಯ ಕುರಿತು ಇರುವ ವದಂತಿಗಳು ಏನೇ ಇರಲಿ, ಈ ಮಹಾನಾಯಕನ ಬದುಕು ಸಾರ್ಥಕತೆ ಪಡೆದ ರೀತಿ ಮೈನವಿರೇಳಿಸುತ್ತದೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MOREಕೇಂದ್ರ ಸಾಹಿತ್ಯ ಅಕಾಡೆಮಿ, ಅನುವಾದ ಪುರಸ್ಕಾರ (2004)