ಮಕ್ಕಳು ಮೆಚ್ಚುವ ಅರೇಬಿಯನ್ ನೈಟ್ಸ್ ಕಥೆಗಳು ಈ ಮಕ್ಕಳ ಕಥಾ ಪುಸ್ತಕವನ್ನು ಲೇಖಕ ನಿರಂಜನ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿರುವ ಕಥೆಗಳು ಮಕ್ಕಳ ಆರ್ಥಪೂರ್ಣ ಭವಿಷ್ಯಕ್ಕಾಗಿ ದಾರಿತೋರುವ ಕತೆಗಳನ್ನು ಹೊಂದಿದ್ದು, ಚಿತ್ರಗಳ ಮೂಲಕ ವಿವರಿಸಲಾಗಿರುವುದರಿಂದ ಮಕ್ಕಳ ಮನಸ್ಸಿಗೆ ಬಹುಬೇಗನೇ ತಲುಪುತ್ತವೆ. ಕುತೂಹಲದ ಜೊತೆಗೆ ಉತ್ತಮ ಸಂದೇಶವನ್ನು ಇಲ್ಲಿನ ಕತೆಗಳಲ್ಲಿ ನೀಡಲಾಗಿದೆ.
ಕನ್ನಡದ ಪ್ರತಿಭಾವಂತ ಲೇಖಕ, ಖ್ಯಾತ ಬರಹಗಾರ ನಿರಂಜನ ಅವರು ಹುಟ್ಟಿದ್ದು 15-06-1924ರಂದು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇಸುಬ್ರಹ್ಮಣ್ಯದ ಸಮೀಪದ ಕುಳಗುಂದದಲ್ಲಿ. ತಾಯಿ ಚೆನ್ನಮ್ಮ. ಸುಳ್ಯದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳಲ್ಲಿ ಓದು. ನೀಲೇಶ್ವರದಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ. ಖ್ಯಾತ ವೈದ್ಯೆ, ಲೇಖಕಿ ಅನುಪಮಾ ನಿರಂಜನ ಅವರೊಂದಿಗೆ ವಿವಾಹವಾದರು. ನಿರಂಜನ ಅವರು ಒಬ್ಬ ಖ್ಯಾತ ಬರಹಗಾರ ಹಾಗೂ ಹೋರಾಟಗಾರ. ಅವರ ಮೊದಲ ಹೆಸರು ಕುಳಕುಂದ ಶಿವರಾಯ. ಅವರು 20ನೇ ಶತಮಾನದ ಪ್ರಮುಖ ಲೇಖಕ ಮತ್ತು ಪ್ರಗತಿಪರ ಚಳವಳಿಯ ಮುಂದಾಳು. ಗಾಂಧೀಜಿ, ಕಾರ್ಲ್ ಮಾರ್ಕ್ಸ್, ವ್ಲಾಡಿಮಿರ್ ಲೆನಿನ್ ವಿಚಾರಧಾರೆಗಳಿಂದ ಪ್ರಭಾವಿತರಾದವರು. ಶ್ರ್ರೀಯುತರು ಸುಮಾರು ...
READ MORE