ರಾಷ್ಟ್ರಕವಿ ಕುವೆಂಪು ಅವರ ಮಲೆನಾಡು ಹಾಗೂ ಅದರ ಸೊಬಗನ್ನು ಹಿಡಿದಿಡುವ ಪ್ರಯತ್ನವನ್ನು ಕೆ.ಪುಟ್ಟಸ್ವಾಮಿ ಅವರು ಮಾಡಿದ್ದಾರೆ. ಮಲೆನಾಡಿನ ಕಣ್ಮನ ತಣಿಸುವ ಸೃಷ್ಟಿ ಸೊಬಗು, ಅಲ್ಲಿ ಜೀವ ವೈವಿಧ್ಯ, ವರ್ಣ ವೈಭವವನ್ನು ಸೊಗಸಾದ ಛಾಯಾಚಿತ್ರ ಬಳಸಿ ದಾಖಲಿಸಲಾಗಿದೆ. ಕುವೆಂಪು ಕೃತಿಗಳ ಅಕ್ಷರಗಳಲ್ಲಿ ದಾಖಲಾದ ದೃಶ್ಯಗಳು ಚಿತ್ರರೂಪ ಪಡೆದು ಅಚ್ಚರಿ ಮೂಡಿಸುತ್ತವೆ.
ಕೆ.ಪುಟ್ಟಸ್ವಾಮಿ- ಹುಟ್ಟಿದ್ದು ಕನಕಪುರ ತಾಲೂಕಿನ ವರಗೆರಹಳ್ಳಿಯಲ್ಲಿ. ಕನಕಪುರ ಕೆ.ಜಿ.ಎಫ್ ಮುಂತಾದೆಡೆಗಳಲ್ಲಿ ಪ್ರಾಥಮಿಕ ಶಿಕ್ಷಣ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ. ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಡಿಪ್ಲಮಾ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ಡಿಲಿಟ್ ಪದವಿ. ಪತ್ರಕರ್ತರಾಗಿ, ಕರ್ನಾಟಕ ಸರಕಾರದ ವಾರ್ತಾ ಇಲಾಖೆ, ಅರಣ್ಯ, ಜೀವ ಪರಿಸರ, ಹಿಂದುಳಿದ ವರ್ಗಗಳ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂತಾದೆಡೆ ಹಲವು ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಜೀವ ಸಂಕುಲಗಳ ಉಗಮ, ಜೀವಜಾಲ, ಸಿನಿಮಾಯಾನ ಮುಂತಾದವು ಮುಖ್ಯ ಕೃತಿಗಳು. ಮಣಿ ...
READ MORE