ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಮನಸ್ಸೇ ನೀ ಪ್ರಶಾಂತವಾಗಿರು. ಇಂದಿನ ಒತ್ತಡದ ಬದುಕಿನಲ್ಲಿ ಮನಸ್ಸಿಗೆ ನೆಮ್ಮದಿಯೇ ಮರೀಚಿಕೆಯಾಗಿದೆ. ಯಾಂತ್ರಿಕತೆಯ ಜೀವನದಿಂದ ಹತಾಶೆ-ನಿರಾಶೆ-ಬೇಸರ ಮನಸ್ಥಿತಿಯ ಪ್ರಮಾನ ಹೆಚ್ಚುತ್ತಿದೆ. ಅತೃಪ್ತಿ, ಅನುಮಾನ, ನಿರಾಸೆಗಳ ಮೂಟೆಯನ್ನೊತ್ತು ಒಂದು ಸಣ್ಣ ರಿಲ್ಯಾಕ್ಸ್ಗಾಗಿ ಕಾದಿರುವವರಿಗೆ ಕೃತಿಯು ಭರವಸೆ ನೀಡುತ್ತದೆ. ಈ ಕೃತಿ 11 ಮುದ್ರಣ ಕಂಡಿದೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE