ಮಾಂಡೋವಿ-ಎಂಬುದು ಗೋವಾ -ಕರ್ನಾಟಕ ರಾಜ್ಯ ಮಧ್ಯೆ ಹರಿಯುವ ನದಿ. ಮುಂದೆ ಅದು ಅರಬ್ಬಿ ಸಮುದ್ರ ಸೇರುತ್ತದೆ. ನೋಬೆಲ್ ಪ್ರಶಸ್ತಿ ವಿಜೇತ ಸ್ಪ್ಯಾನಿಷ್ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ 1985 ರಲ್ಲಿ ಬರೆದ ಕಾದಂಬರಿ "ಲವ್ ಇನ್ ದಿ ಟೈಮ್ ಆಫ್ ಕಾಲೆರಾ". ಇದನ್ನು ಲೇಖಕ ರವಿ ಬೆಳೆಗೆರೆ ಅವರು ಕನ್ನಡಕ್ಕೆ ಮಾಂಡೋವಿ ಶೀರ್ಷಿಕೆಯಡಿ ಅನುವಾದಿಸಿದ್ದಾರೆ. ಪ್ರೀತಿಸಿದ ಹುಡುಗಿಗೋಸ್ಕರ 52 ವರ್ಷಗಳ ಕಾಲ ಕಾಯುವ ಕಥಾ ವಸ್ತು ಇಲ್ಲಿದೆ. ಇದೊಂದು ಅಪೂರ್ವ ಪ್ರೇಮ ಕಥನವಾಗಿದೆ.
ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...
READ MORE