ಎಂ. ವಸುಂಧರಾ ಹಾಗೂ ಡಾ. ವಸುಂಧರಾ ಭೂಪತಿ ಅವರು ಸಂಯುಕ್ತವಾಗಿ ಬರೆದ ಕೃತಿ-ಮನೆಯಂಗಳದಲ್ಲಿ ಔಷಧಿವನ. ಹಿತ್ತಲ ಗಿಡ ಮದ್ದಲ್ಲ ಎಂಬ ಭಾವನೆ ನಮ್ಮಲ್ಲಿ ಬಲವಾಗಿ ಬೇರೂರಿದೆ. ಹೀಗಾಗಿ, ಮನೆಯ ಮದ್ದನ್ನು ನಾವು ನಿರ್ಲಕ್ಷಿಸಿ ಅಲೋಪಥಿಯ ಔಷಧಿಗೆ ಮಾರು ಹೋಗುತ್ತೇವೆ. ಈ ಔ಼ಷಧಿಗಳು ಬಹುತೇಕ ವೇಳೆ ಅಡ್ಡ ಪರಿಣಾಮ ಬೀರುತ್ತವೆ. ಹಣ ಹಾಗೂ ಸಮಯವನ್ನೂ ಹಾಳು ಮಾಡಿಕೊಳ್ಳುತ್ತೇವೆ. ಕೆಲವೊಮ್ಮೆ ಈ ರೋಗಗಳಿಗೆ ಮನೆಯಲ್ಲೇ ಇರುವ ಸಾಮಗ್ರಿಗಳು ಮದ್ದಾಗಿರುತ್ತವೆ., ಆದರೆ, ನಮಗೆ ತಿಳಿದಿರುವುದಿಲ್ಲ. ಇಂತಹ ಸಂಗತಿಗಳ ಕಡೆಗೆ ಲೇಖಕರು ಓದುಗರ ಗಮನ ಸೆಳೆಯುವುದು ಈ ಕೃತಿಯ ಉದ್ದೇಶ. ಈ ಕೃತಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಪ್ರಶಸ್ತಿ (2007) ಲಭಿಸಿದೆ.
ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ. ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...
READ MORE