‘ಮಣ್ಣಿನ ಓದು’ ಶಿವಾನಂದ ಕಳವೆ ಅವರು ಇಡೀ ಕರ್ನಾಟಕದಲ್ಲಿ ನಡೆಸಿದ ಕೃಷಿ ಪ್ರವಾಸ ಕಥನದ ಚಿತ್ರಣ ನೀಡುವ ಮೊದಲ ಕೃತಿ. ಕರ್ನಾಟಕದ ರೈತರ ಬದುಕು, ಕೃಷಿಯಲ್ಲಾಗಿರುವ ಬದಲಾವಣೆಗಳ ಕುರಿತು ಇಡೀ ಕರ್ನಾಟಕ ಸುತ್ತಿ ಬರೆದ ಕೃಷಿ ಕಥನಗಳು ಈ ಕೃತಿಯಲ್ಲಿವೆ.
ಶಿವಾನಂದ ಕಳವೆ ಅವರು ಶಿರ್ಸಿ ಬಳಿಯ ಕಳವೆ ಗ್ರಾಮದವರು. ವೃತ್ತಯಿಂದ ಪತ್ರಕರ್ತರು. ಪರಿಸರ ಜಾಗೃತಿ ಮೂಡಿಸುವ ಬರೆಹಗಳು ಇವರ ವೃತ್ತಿ ವೈಶಿಷ್ಟತೆ. ಶಿರಸಿ ಸಮೀಪದ ನೀರ್ನಳ್ಳಿಯ ‘ಮಲೆನಾಡ ಮಳೆಕೇಂದ್ರ’ದ ರೂವಾರಿಯೂ ಹೌದು. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಅಲ್ಲಿಯ ಕೃಷಿ, ಪರಿಸರ, ಪರಿಸರ, ಜನಜೀವನಗಳನ್ನು ದಾಖಲಿಸಿದ್ದಾರೆ. ಈ ಪ್ರವಾಸದ ಬರವಣಿಗೆ ‘ಕಾಡುನೆಲದ ಕಾಲಮಾನ’. ದೇಸೀ ಜ್ಞಾನದ ವಿವಿಧ ಮಜಲುಗಳ ಅಧ್ಯಯನ ನಡೆಸಿದ್ದಾರೆ. ಮುಡೇಬಳ್ಳಿ, ಮುಳ್ಳೆಹಣ್ಣು (ಸಂಪದ.ನೆಟ್ ಅಂತರ್ಜಾಲ ಪತ್ರಿಕೆ), ಬಹುಧಾನ್ಯ (ಉದಯವಾಣಿ), ದಾಟ್ ಸಾಲು (ನೀರ ಸಂರಕ್ಷಣೆಯ ಕಾರ್ಯದ ದಾಖಲಾತಿ)-ಇವು ಅಂಕಣಗಳ ಶೀರ್ಷಿಕೆಗಳು. ಪ್ರಮುಖ ಕೃತಿಗಳು: ಕಾನ್ ಗೌರಿ, ಗೌರಿ ಜಿಂಕೆಯ ಆತ್ಮಕಥೆ, ಅರಣ್ಯ (ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿತ), ಅರಣ್ಯ ಜ್ಞಾನದ ...
READ MORE