ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ-ಮನೋರೋಗಕ್ಕೆ ಚಿಕಿತ್ಸೆ ಏನು? ಮನೋಬೇನೆ ಎಂದರೆ ರೋಗಿಯು ಆಸ್ಪತ್ರೆಯ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯಬಹುದು. ಆದರೆ, ಮನೋರೋಗಿಯು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕಾಗುತ್ತದೆ. ಸುದೀರ್ಘ ಚಿಕಿತ್ಸೆಯ ಅಗತ್ಯವಿರುತ್ತದೆ. ಮನೋಬೇನೆಯನ್ನು ಕೌನ್ಸೆಲಿಂಗ್ ಮೂಲಕ ಸಮಸ್ಯೆ ಪರಿಹರಿಸಿ, ರೋಗಿಯು ಈ ಮೊದಲಿನಂತೆ ಇರಲು ಸಾಧ್ಯವಾಗುತ್ತದೆ. ಆದರೆ, ಮನೋರೋಗಿಗೆ ನಿರಂತರ ಚಿಕಿತ್ಸೆಯ ಅನಿವಾರ್ಯತೆ ಇರುತ್ತದೆ. ಇಂತಹ ಸಂಗತಿಗಳ ಬಗ್ಗೆ ಜನಸಾಮಾನ್ಯರಿಗೆ ವಿವರ ಮಾಹಿತಿ ನೀಡುವುದು ಈ ಕೃತಿಯ ಉದ್ದೇಶ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE