ಲೇಖಕಿ ಭಾರತಿ ಬಿ ವಿ ಅವರ ಲಲಿತ ಪ್ರಬಂಧಗಳ ಸಂಕಲನ ’ಮಿಸಳ್ ಭಾಜಿ’.
ಲೇಖಕಿ ತಮ್ಮ ಅನುಭವ ಬದುಕಿನ ನಗೆ ತರಿಸುವ ಸಂಗತಿಗಳನ್ನು ಇಲ್ಲಿ ದಾಖಲಿಸಿದ್ದಾರೆ. ಮತ್ತು ಅಷ್ಟೇ ಗಂಭೀರ ಬದುಕಿನ ಚಿತ್ರಣಗಳನ್ನೂ, ವ್ಯಕ್ತಿತ್ವ ಧೋರಣೆಗಳನ್ನೂ ಸಹ ಸೂಕ್ಷ್ಮವಾಗಿ ಹಿಡಿದಿಟ್ಟಿದ್ದಾರೆ. ಸಾವಿನ ಆತಂಕ, ಬದುಕಿನ ಕಷ್ಟ ಕಾರ್ಪಣ್ಯಗಳ ನಡುವಿನ ಧೋರಣೆ, ಗಂಡನ ಮನೆಯ ಹೊಸತನಕ್ಕೆ ಹೊಂದಿಕೊಳ್ಳುವ ಸಂಕಷ್ಟ, ಗಂಭೀರ ಚಿಂತನೆ, ಯಾತನೆಗಳನ್ನು ಹೊತ್ತಿರುವ ಇವರ ಅನುಭವ ಕಥನವೆಂದೇ ಪರಿಗಣಿಸಬಹುದಾದ ಲಲಿತ ಪ್ರಬಂಧಗಳನ್ನು ಅವರ ’ಮಿಸಳ್ ಭಾಜಿ’ ಕೃತಿಯಲ್ಲಿ ಸಂಕಲಿಸಿದ್ದಾರೆ.
ಭಾರತಿ ಬಿ ವಿ ಅವರು ಜನಿಸಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ. ಬಿ.ಕಾಂ ಪದವೀಧರೆಯಾಗಿರುವ ಇವರಿಗೆ ಕವಿತೆ ರಚನೆ, ಅನುವಾದ, ಪ್ರವಾಸ ಹವ್ಯಾಸಗಳಾಗಿವೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಇವರು 'ಸಾಸಿವೆ ತಂದವಳು', 'ಮಿಸಳ್ ಭಾಜಿ', 'ಕಿಚನ್ ಕವಿತೆಗಳು', 'ಜಸ್ಟ್ ಮಾತ್ ಮಾತಲ್ಲಿ', 'ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ', 'ನಕ್ಷತ್ರಗಳ ಸುಟ್ಟ ನಾಡಿನಲ್ಲಿ', 'ಎಲ್ಲಿಂದಲೋ ಬಂದವರು' ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ 'ಸಾಸಿವೆ ತಂದವಳು' ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘದ ಎಂ.ಕೆ ಇಂದಿರಾ ಪ್ರಶಸ್ತಿ ಹಾಗೂ 'ಮಿಸಾಳ್ ಬಾಜಿ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಬಂದಿದೆ. ಪ್ರಶಸ್ತಿಗಳು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ...
READ MOREಲಲಿತ ಪ್ರಬಂಧ-2016