ಅಂಕಣಕಾರ ಪ್ರೇಮಶೇಖರ ಅವರು ’ವಿಜಯವಾಣಿ’ ದೈನಿಕದ “ಜಗದಗಲ” ಅಂಕಣದಲ್ಲಿ ಬರೆದ ಲೇಖನಗಳಲ್ಲಿ ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕುರಿತಾದ ಆಯ್ದ ಇಪ್ಪತ್ತೆಂಟು ಲೇಖನಗಳು ಇಲ್ಲಿವೆ. ಪ್ರಧಾನಿ ಮೋದಿಯವರ ಕಾರ್ಯ ಸಾಧನೆಗಳಿಂದ ಹಿಡಿದು ಪ್ರಸ್ತುತ ರಾಜಕೀಯದ ಆಗುಹೋಗುಗಳನ್ನು ಇಲ್ಲಿನ ಬರೆಹಗಳಲ್ಲಿ ಅವಲೋಕಿಸಿದ್ದಾರೆ. ದೇಶ ವಿದೇಶಗಳ ಭೌಗೋಳಿಕ ಸಮಸ್ಯೆ, ರಾಜಕೀಯ ಪ್ರಜ್ಞೆ, ಇತಿಹಾಸದ ಹಾದಿಯ ಕುರಿತು ಉಲ್ಲೇಖಿಸಿದ ವಿವರಗಳು ಈ ಪುಸ್ತಕದಲ್ಲಿ ಲಭ್ಯವಿವೆ.
ಹೊರನಾಡ ಕನ್ನಡಿಗ ಪ್ರೇಮಶೇಖರ ಪಠ್ಯವಿಷಯಗಳ ಬಗ್ಗೆ ಇಂಗ್ಲೀಷಿನಲ್ಲಿ ಸಂಶೋಧನಾ ಲೇಖನಗಳನ್ನು ಹಾಗೂ ಕನ್ನಡದಲ್ಲಿ ಕಥೆಕಾದಂಬರಿಗಳನ್ನು ಬರೆಯುವುದರ ಮೂಲಕ ಬರವಣಿಗೆಯನ್ನಾರಂಭಿಸಿದವರು.. ಹುಟ್ಟಿದ್ದು 1960 ಜೂನ್ 22 ಕೊಳ್ಳೇಗಾಲದಲ್ಲಿ. ದೆಹಲಿಯಲ್ಲಿ ವಿದ್ಯಾಭ್ಯಾಸ ಮಾಡಿ, ಇಪ್ಪತ್ತೆರಡು ವರ್ಷಗಳ ಸುಧೀರ್ಘ ಕಾಲ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಬೋಧಿಸಿ 2012ರಲ್ಲಿ ಸ್ವಯಂನಿವತಿ ಪಡೆದುಕೊಂಡಿದ್ದಾರೆ. ಪತ್ರಿಕಾರಂಗದಲ್ಲಿರುವ ಹಿತೈಷಿಗಳ ಬಯಕೆಯಂತೆ ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಕನ್ನಡದಲ್ಲಿ ಐನೂರರಷ್ಟು ಲೇಖನಗಳನ್ನು ಬರೆದಿದ್ದಾರೆ. ಇದುವರೆಗೆ ಎರಡು ಕಾದಂಬರಿಗಳನ್ನೂ, ಹತ್ತು ಕಥಾ ಸಂಕಲನಗಳನ್ನೂ, ಹನ್ನೊಂದು ಲೇಖನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯಾಸಕ್ತರಿಗೆ ಕಥಾರಚನೆಯಲ್ಲಿ ತರಬೇತಿ ನೀಡುವ ಕಾರ್ಯಾಗಾರಗಳನ್ನು ...
READ MORE