ಲೇಖಕ ಪ್ರತಾಪಸಿಂಹ ಹಾಗೂ ಡಾ. ಜಿ.ಬಿ. ಹರೀಶ್ ಜಂಟಿಯಾಗಿ ಬರೆದ ಕೃತಿ-ಮಹಮ್ಮದ್ ಅಲಿ ಜಿನ್ನಾ. ಭಾರತದ ಸ್ವಾತಂತ್ಯ್ರಕ್ಕಾಗಿ ಹೋರಾಡಿದವರಲ್ಲಿ ಮಹಮ್ಮದ್ ಅಲಿ ಜಿನ್ನಾ ಸಹ ಒಬ್ಬರು. ಮಹಾತ್ಮ ಗಾಂಧೀಜಿ ಅವರೊಡನೆ ಇದ್ದು, ದೇಶದ ಐಕ್ಯತೆಯನ್ನು ಕಾಯ್ದುಕೊಂಡು ಬಂದಿದ್ದರು. ಆದರೆ, ದೇಶ ವಿಭಜನೆಯಾಗಲು ಮಹಮ್ಮದ್ ಅಲಿ ಜಿನ್ನಾ ಅವರ ಮಹಾದಾಸೆಯೇ ಕಾರಣ ಎಂಬ ರೀತಿಯಲ್ಲಿ ಇತಿಹಾಸದ ಘಟನೆಗಳು ವಿಶ್ಲೇಷಿಸುತ್ತವೆ. ಮೊದಲು ತಾವು ಭಾರತೀಯ ಎಂದಿದ್ದ ಜಿನ್ನಾ ಸ್ವಾತಂತ್ಯ್ರ ನಂತರ ಅವರು ಪಾಕಿಸ್ತಾನದ ಬೇಡಿಕೆಯನ್ನು ಮುಂದಿಟ್ಟರು. ಹೀಗೆ ವಿಭಿನ್ನ ವ್ಯಕ್ತಿತ್ವವನ್ನು ಕಟ್ಟಿಕೊಡುವ ಕೃತಿ ಇದು.
ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ. ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು. ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...
READ MORE