ಮನೋವೈದ್ಯ ಡಾ. ಸಿ.ಆರ್. ಚಂದ್ರಶೇಖರ ಅವರು ಬರೆದ ಕೃತಿ-ಮುಪ್ಪು ಮತ್ತು ಮರಣ ಮುಂದೂಡುವುದು ಹೇಗೆ?. ಅನಾರೋಗ್ಯವು ನಮ್ಮನ್ನು ಮುಪ್ಪು ಹಾಗೂ ಮರಣದೆಡೆಗೆ ಕರೆದುಕೊಂಡು ಹೋಗುತ್ತದೆ. ಇವೆರಡರಿಂದ ದೂರ ಇರಬೇಕಾದರೆ ಆರೋಗ್ಯದಿಂದ ಇರಬೇಕು ಎಂಬುದು ಆರೋಗ್ಯವೆಂದರೆ ಅದು ಕೇವಲ ದೇಹಕ್ಕೆ ಸಂಬಂಧಿಸಿದ್ದಲ್ಲ; ಬದಲಾಗಿ, ಅದು ಮನಸ್ಸಿಗೂ ಸಂಬಂಧಿಸಿದ್ದು, ಮನಸ್ಸು ನೆಮ್ಮದಿಯಾಗಿದ್ದರೆ ದೇಹವು ಆರೋಗ್ಯವಾಗಿರುತ್ದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಮಹತ್ವವವನ್ನು ತಿಳಿಸುವ ಸಲಹೆ ರೂಪದ ಬರೆಹಗಳು ಇಲ್ಲಿದೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE