ಸಂಸ್ಕೃತಿ, ಮೌಲ್ಯ, ಅಧ್ಯಾತ್ಮ, ತಾತ್ವಿಕ ಚಿಂತನೆ, ಜೀವನದರ್ಶನಗಳನ್ನು ಮಾಡಿಸಿದ ಹಿರಿಯ ಸಾಹಿತಿ ಡಿ.ವಿ.ಜಿ ಅವರು ಮೈಸೂರಿನ ದಿವಾನರಾದವರನ್ನು ಈ ಕೃತಿಯಲ್ಲಿ ಪರಿಚಯಿಸಿದ್ದಾರೆ. ರಾಜಕೀಯ ಸೇರಿದಂತೆ ಸುಮಾರು 70 ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದು, ಹತ್ತು ಹಲವಾರು ವ್ಯಕ್ತಿ ಚಿತ್ರಣಗಳನ್ನು ಕಟ್ಟಿಕೊಟ್ಟು ಕನ್ನಡ ನಾಡು-ನುಡಿ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಸಿದ್ದ ಗಣ್ಯರನ್ನು ಅಮರರಾಗಿಸಿದ್ದಾರೆ. ಈ ನಿಟ್ಟಿನಲ್ಲಿ, ಮೈಸೂರಿನ ದಿವಾನರಾದ ಮಿರ್ಜಾ ಇಸ್ಮಾಯಿಲ್, ರಂಗಾಚಾರ್ಲು ಇತ್ಯಾದಿ ಮಹನೀಯರ ಜೀವನ ಸಾಧನೆ, ಸಾರ್ವಜನಿಕರ ಕೆಲಸಗಳಲ್ಲಿ ಅವರ ಕಳಕಳಿ ಇತ್ಯಾದಿ ಪರಿಚಯಿಸುವ ಮೂಲಕ ಸೇವಕರ ಮಾದರಿಗಳನ್ನು ಓದುಗರ ಮುಂದೆ ಇರಿಸಿದ್ದಾರೆ.
ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...
READ MORE