ನಾಡಿನ ನಕ್ಷತ್ರಗಳ ಪುಸ್ತಕವು ವ್ಯಕ್ತಿಚಿತ್ರಗಳ ಕೃತಿ, ವ್ಯಕ್ತಿಚಿತ್ರಗಳನ್ನು ಸಾಮಾನ್ಯವಾಗಿ ಎರಡು ರೀತಿಯಲ್ಲಿ ಬರೆಯುವ ಪದ್ಧತಿಯುಂಟು. ಮೊದಲನೆಯ ಪದ್ಧತಿಯನ್ನು ಸಂಕ್ಷಿಪ್ತವಾಗಿ ಗಮನಿಸೋಣ. ಕುವೆಂಪು, ಬೇಂದ್ರೆ, ಮಾಸ್ತಿ, ಗೋಕಾಕ್ ಮುಂತಾದ ಮಹನೀಯರ ಬಗ್ಗೆ ವ್ಯಕ್ತಿ ಚಿತ್ರಗಳನ್ನು ಬರೆಯಬಹುದು. ಇಂತಹ ವ್ಯಕ್ತಿಚಿತ್ರಗಳಲ್ಲಿ ನಿಗದಿತ ವ್ಯಕ್ತಿಯ ಬದುಕು-ಸಾಧನೆಯ ಸಂಕ್ಷಿಪ್ತ ಚಿತ್ರಣವಿರುತ್ತದೆ. ಸಾಮಾನ್ಯವಾಗಿ 1000-1500 ಪದಗಳ ಮಿತಿಯಿರುತ್ತದೆ. ಇಂತಹ ಬರಹವನ್ನು ಓದಿದಾಗ, ಆ ವ್ಯಕ್ತಿಯ ಬದುಕಿನ ಬಗ್ಗೆ ಒಂದು ಸ್ಥೂಲ ಪರಿಕಲ್ಪನೆಯು ಓದುಗನಿಗೆ ಬರುತ್ತದೆ. ನಾವು ಏಕೆ ಈ ವ್ಯಕ್ತಿಯ ಬದುಕಿನ ಬಗ್ಗೆ ತಿಳಿದುಕೊಳ್ಳಬೇಕು, ಇದರಿಂದ ನನಗೇನು ಲಾಭ, ಈ ನಾಡಿನ ನಿರ್ಮಾಣದಲ್ಲಿ ಇವರ ಪಾಲು ಎಷ್ಟು ಎಂಬ ಮೂಲಭೂತ ಪ್ರಶ್ನೆಗಳಿಗೆ ಉತ್ತರವು ದೊರೆಯುತ್ತದೆ. ಈ ಓದಿನಿಂದ ನಮ್ಮ ಸಾಮಾನ್ಯ ತಿಳಿವಳಿಕೆ ಹೆಚ್ಚುವುದರ ಜೊತೆಯಲ್ಲಿ, ಇಂತಹವರ ಬದುಕಿನಿಂದ ಸ್ಫೂರ್ತಿಯನ್ನು ಪಡೆಯುವ ಸಾಧ್ಯತೆಯನ್ನು ಅಲ್ಲಗಳೆಯಲು ಸಾಧ್ಯವಿಲ್ಲ ಎಂದು ನಾ.ಸೋಮೇಶ್ವರ ಪುಸ್ತಕದ ಮುನ್ನುಡಿಯಲ್ಲಿ ತಿಳಿಸಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE